ಬ್ರೇಕಿಂಗ್ ನ್ಯೂಸ್
23-11-23 09:38 pm Bangalore Correspondent ಕರ್ನಾಟಕ
ಬೆಂಗಳೂರು, ನ.23: ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಪಕ್ಷದ ಕೆಲಸಗಳಿಂದ ಅಂತರ ಕಾಯ್ದುಕೊಂಡಿದ್ದ ಬಿಜೆಪಿ ಹಿರಿಯ ಮುಖಂಡ ವಿ.ಸೋಮಣ್ಣ ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕದಿಂದ ಮುನಿಸಿಕೊಂಡಿದ್ದರು. ಆನಂತರ ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿಯೂ ಹರಿದಾಡಿತ್ತು. ಇದೀಗ ಸೋಮಣ್ಣ, ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸೋಮಣ್ಣ, ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿಯ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಾಗಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ. ನನ್ನನ್ನು ಯಾರು ಸಂಪರ್ಕಿಸಿಯೂ ಇಲ್ಲ, ನಾನೂ ಯಾರನ್ನೂ ಸಂಪರ್ಕಿಸಿಲ್ಲ. ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸೋಮಣ್ಣ ನಡೆ ಸಂಚಲನ ಮೂಡಿಸಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಸೋಮಣ್ಣ ಅವರು ವಿಧಾನಸಭೆ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರ ಬಿಟ್ಟು ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸ್ಪರ್ಧಿಸಿದ್ದರು. ಅಲ್ಲದೆ, ಚಾಮರಾಜನಗರ ಕ್ಷೇತ್ರಕ್ಕೂ ಸ್ಪರ್ಧೆ ಮಾಡಿದ್ದರು. ಎರಡೂ ಕ್ಷೇತ್ರಗಳಲ್ಲಿ ಸೋಮಣ್ಣ ಸೋಲು ಕಂಡಿದ್ದರು. ಬಳಿಕ ತಮ್ಮನ್ನು ರಾಜಕೀಯವಾಗಿ ಬಲಿ ಕೊಟ್ಟರು ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ಹೇಳಿಕೊಂಡಿದ್ದರು.
Raising a banner of revolt against BJP, prominent party leader and former minister V. Somanna has announced to disclose his future plan of action after December 6. Somanna is maintaining a distance from the saffron party following his defeat in the Assembly elections earlier this year.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm