ಬ್ರೇಕಿಂಗ್ ನ್ಯೂಸ್
23-11-23 09:38 pm Bangalore Correspondent ಕರ್ನಾಟಕ
ಬೆಂಗಳೂರು, ನ.23: ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಪಕ್ಷದ ಕೆಲಸಗಳಿಂದ ಅಂತರ ಕಾಯ್ದುಕೊಂಡಿದ್ದ ಬಿಜೆಪಿ ಹಿರಿಯ ಮುಖಂಡ ವಿ.ಸೋಮಣ್ಣ ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕದಿಂದ ಮುನಿಸಿಕೊಂಡಿದ್ದರು. ಆನಂತರ ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿಯೂ ಹರಿದಾಡಿತ್ತು. ಇದೀಗ ಸೋಮಣ್ಣ, ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸೋಮಣ್ಣ, ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿಯ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಾಗಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ. ನನ್ನನ್ನು ಯಾರು ಸಂಪರ್ಕಿಸಿಯೂ ಇಲ್ಲ, ನಾನೂ ಯಾರನ್ನೂ ಸಂಪರ್ಕಿಸಿಲ್ಲ. ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸೋಮಣ್ಣ ನಡೆ ಸಂಚಲನ ಮೂಡಿಸಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಸೋಮಣ್ಣ ಅವರು ವಿಧಾನಸಭೆ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರ ಬಿಟ್ಟು ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸ್ಪರ್ಧಿಸಿದ್ದರು. ಅಲ್ಲದೆ, ಚಾಮರಾಜನಗರ ಕ್ಷೇತ್ರಕ್ಕೂ ಸ್ಪರ್ಧೆ ಮಾಡಿದ್ದರು. ಎರಡೂ ಕ್ಷೇತ್ರಗಳಲ್ಲಿ ಸೋಮಣ್ಣ ಸೋಲು ಕಂಡಿದ್ದರು. ಬಳಿಕ ತಮ್ಮನ್ನು ರಾಜಕೀಯವಾಗಿ ಬಲಿ ಕೊಟ್ಟರು ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ಹೇಳಿಕೊಂಡಿದ್ದರು.
Raising a banner of revolt against BJP, prominent party leader and former minister V. Somanna has announced to disclose his future plan of action after December 6. Somanna is maintaining a distance from the saffron party following his defeat in the Assembly elections earlier this year.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am