ಬ್ರೇಕಿಂಗ್ ನ್ಯೂಸ್
27-11-23 05:37 pm Bangalore Correspondent ಕರ್ನಾಟಕ
ಬೆಂಗಳೂರು, ನ 27: ಬ್ಯಾಂಕ್ ಸಾಲ ಯೋಜನೆಗಳ ಮೂಲಕ ಉದ್ಯಮಿಗಳನ್ನು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನ ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಯೂಸುಫ್ ಎಂಬಾತನಾಗಿದ್ದು, ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾಯಿಸಲಾಗಿದೆ. ಯೂಸುಫ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೊಂದಿಗಿಗೆ ನಂಟು, ರಾಜಕೀಯ ಚಟುವಟಿಕೆಗಳಿಗಾಗಿ ಉನ್ನತ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿರುವುದಾಗಿ ಹೇಳುವ ಮೂಲಕ ವ್ಯಕ್ತಿಗಳನ್ನು ವಂಚಿಸಿದ್ದಾನೆ. ವಂಚನೆಗೆ ಸಂಬಂಧಿಸಿದಂತೆ ಈತನ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಇತ್ತೀಚೆಗೆ ಬ್ಯಾಂಕ್ ಸಾಲಕ್ಕೆ ಅನುಕೂಲ ಮಾಡಿಕೊಡುವ ನೆಪದಲ್ಲಿ ಹೋಟೆಲ್ ಉದ್ಯಮಿ ಶಾಜಿ ಕೃಷ್ಣನ್ ಎನ್ನುವವರಿಂದ ದಾಖಲೆಗಳನ್ನು ಪಡೆದುಕೊಂಡಿದ್ದ. ರಾಷ್ಟ್ರೀಕೃತ ಬ್ಯಾಂಕ್ನಿಂದ ಸಾಲ ಪಡೆದಿರುವ ಅನಿಸಿಕೆಯಿಂದ ಕೃಷ್ಣನ್, ಯೂಸುಫ್ ಅವರೊಂದಿಗೆ ಬ್ಯಾಂಕ್ಗೆ ತೆರಳಿ ಅಗತ್ಯ ಅರ್ಜಿಗಳಿಗೆ ಸಹಿ ಹಾಕಿದ್ದರು. ಆದರೆ, ಆರೋಪಿ 2.5 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ್ದು, ನಿಗದಿತ ಅವಧಿಯೊಳಗೆ ಮರುಪಾವತಿ ಮಾಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿರುವು ನಂತರ ತಿಳಿದುಬಂದಿದೆ. ಕೃಷ್ಣನ್ ಇತರೆ ವ್ಯವಹಾರಕ್ಕಾಗಿ ಬ್ಯಾಂಕ್ ಗೆ ಭೇಟಿ ನೀಡಿದಾಗ ವಂಚನೆ ಬೆಳಕಿಗೆ ಬಂದಿದೆ.
ಕೃಷ್ಣನ್ ಅವರ ದೂರಿನ ಆಧಾರದ ಮೇಲೆ ವಂಚನೆ ಪ್ರಕರಣವನ್ನು ದಾಖಲಿಸಲಾಗಿದ್ದು, ಯೂಸುಫ್ನನ್ನು ಬಂಧಿಸಲಾಗಿದೆ. ಆರೋಪಿ ಉದ್ಯಮಿಗಳೊಂದಿಗೆ ಸ್ನೇಹ ಬೆಳೆಸಿದ್ದು, ರಾಜಕೀಯ ಮುಖಂಡರು ಮತ್ತು ಬ್ಯಾಂಕ್ ಮ್ಯಾನೇಜರ್ಗಳೊಂದಿಗೆ ಸಂಪರ್ಕ ಹೊಂದಿದ್ದೇನೆ ಎಂದು ಹೇಳಿರುವುದು ತನಿಖೆಯಿಂದ ತಿಳಿದುಬಂದಿದೆ. ಸಚಿವರು ಮತ್ತು ಅಧಿಕಾರಿಗಳಿಗೆ ಪಾವತಿ ಮೂಲಕ ಸರ್ಕಾರಕ್ಕೆ ಸಂಬಂಧಿಸಿದ ಉದ್ಯಮದ ಕೆಲಸಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಉದ್ಯಮಿಗಳಿಂದ ಹಣ ಪಡೆದಿದ್ದ ಎನ್ನಲಾಗಿದೆ.
Man cheats businessman of 2.5 crores in the name of BJP president Vijayendra in Bangalore.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm