ಬ್ರೇಕಿಂಗ್ ನ್ಯೂಸ್
28-11-23 07:28 pm Bangalore Correspondent ಕರ್ನಾಟಕ
ಬೆಂಗಳೂರು, ನ 28: ರಾಜ್ಯದ ಕಾಂಗ್ರೆಸ್ನವರು ಅಮಲಿನಲ್ಲಿದ್ದಾರೆ. ಗ್ಯಾರಂಟಿ ನೀಡಿ ನಾವು ಗೆದ್ದಿದ್ದು ಅಂತ ಭ್ರಮೆಯಲ್ಲಿದ್ದಾರೆ ಎಂದು ಸಂಸದ ಡಿ.ವಿ. ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಬಿಜೆಪಿಯವರ ಆಂತರಿಕ ಸಮಸ್ಯೆ, ಮತ್ತಿತರ ಕಾರಣಗಳಿಂದ ಕಾಂಗ್ರೆಸ್ ರಾಜ್ಯದಲ್ಲಿ ಗೆದ್ದಿದೆ ಅಷ್ಟೇ. ಗ್ಯಾರಂಟಿಗಳನ್ನು ಕೊಡುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಸಮರ್ಪಕವಾಗಿ ಜನರಿಗೆ ಪೂರೈಸುತ್ತಿಲ್ಲ ಎಂದು ಆರೋಪಿಸಿದರು.
ಕರ್ನಾಟಕ ಸರ್ಕಾರದ ಜಾಹೀರಾತುಗಳು ತೆಲಂಗಾಣದಲ್ಲಿ: ತೆಲಂಗಾಣದಲ್ಲಿ ಜಾಹೀರಾತು ಕೊಟ್ಟಿರುವ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗದ ನೋಟಿಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದ ಜಾಹೀರಾತುಗಳು ಎಲ್ಲಿರಬೇಕಿತ್ತೋ ಅಲ್ಲಿ ಇಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ನವ್ರು ತಮ್ಮ ಫ್ರಿಬೀಸ್ಗಳ ಜಾಹೀರಾತು ಕೊಟ್ಟಿದ್ದಾರೆ. ಕಾಂಗ್ರೆಸ್ ರಾಜ್ಯದ ಜನರ ತೆರಿಗೆ ಹಣ ಪೋಲು ಮಾಡಿದೆ. ಹೀಗಾಗಿ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ನೋಟಿಸ್ ಕೊಟ್ಟಿದೆ. ಆಯೋಗ ಖಂಡಿತ ಈ ಸರ್ಕಾರದ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ ಎಂದು ಡಿವಿಎಸ್ ಹೇಳಿದರು.
ಫ್ರೀ ಬೀಸ್ ಜಾಹೀರಾತು:ತೆಲಂಗಾಣದಲ್ಲಿ ಫ್ರೀ ಬೀಸ್ ಜಾಹೀರಾತು ಹಾಕಿ, ಕರ್ನಾಟಕದ ಹಣ ದುರುಪಯೋಗ ಮಾಡುತ್ತಿರುವುದು ಕಂಡುಬಂದಿದೆ. ರಾಜ್ಯದ ಖಜಾನೆ ಬರ್ಬಾದ್ ಮಾಡಲು ಹೊರಟಿದ್ದಾರೆ. ರಾಜ್ಯದ ವಿಚಾರ ಜಾಹೀರಾತು ಮಾಡಬಾರದು ಅಂತಿಲ್ಲ. ಅದಕ್ಕೆ ಕಾಲ ಸನ್ನಿವೇಶ ಇದೆ. ಕರ್ನಾಟಕ ಕುಲಗೆಡಿಸಿರುವಂತೆ, ತೆಲಂಗಾಣ ರಾಜ್ಯ ಕುಲಗೆಡಿಸಲು ಹೊರಟಿದೆ. ಕರ್ನಾಟಕದ ಹಣ ಲೂಟಿ ಮಾಡಿ ಚುನಾವಣೆ ಮಾಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಅಲ್ಲಿ ಖರ್ಚು ಮಾಡಿದ ಹಣ ಕಾಂಗ್ರೆಸ್ ನವರಿಗೆ ಎಲ್ಲಿಂದ ಬಂತು?. ಇದರ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ಕೊಡಬೇಕಿದೆ. ಜನ ದುರುಪಯೋಗ ಮಾಡುವುದರ ವಿರುದ್ಧ ನಿಲ್ಲಬೇಕು. ಮುಂದಿನ ದಿನಗಳಲ್ಲಿ ಜನ ತೀರ್ಮಾನ ಮಾಡಬೇಕು ಎಂದರು.
D. V. Sadananda Gowda slams Congress in Bangalore over telagana elections.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm