ಬ್ರೇಕಿಂಗ್ ನ್ಯೂಸ್
29-11-23 08:11 pm Bangalore Correspondent ಕರ್ನಾಟಕ
Photo credits : ANI news
ಬೆಂಗಳೂರು, ನ.29: ಚೈನಾ ನ್ಯುಮೋನಿಯಾ ಬಗ್ಗೆ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೈನಾ ನ್ಯುಮೋನಿಯಾ ಹರಡುತ್ತಿದೆ ಎಂಬ ವರದಿಗಳ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಪ್ರಕಟಿಸಿದೆ. ಇದೇ ರೀತಿ ಕೇಂದ್ರ ಸರ್ಕಾರವೂ ಈ ಸಂಬಂಧ ಮಾರ್ಗಸೂಚಿ ಪ್ರಕಟಿಸಿದೆ ಎಂದು ಹೇಳಿದರು.
ರಾಜ್ಯದಲ್ಲಿ ಇದುವರೆಗೆ ಚೈನಾ ನ್ಯುಮೋನಿಯಾಗೆ ಸಂಬಂಧಿಸಿದ ವೈರಸ್ ಪತ್ತೆಯಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಆಸ್ಪತ್ರೆಗಳಲ್ಲೂ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಈ ಸಂಬಂಧ ಅಣಕು ಪ್ರದರ್ಶನ ನಡೆಸಿ ಎಚ್ಚರಿಕೆ ಮೂಡಿಸಬೇಕು ಎಂಬುದೂ ಸೇರಿದಂತೆ ಹಲವು ಬಗೆಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಳಕೆ ಮಾಡಲು ಆದ್ಯತೆ ನೀಡುವಂತೆ ಹೇಳಲಾಗಿದೆ ಎಂದರು.

ಜ್ವರ ಬಂದ ತಕ್ಷಣ ಜನ ಆಸ್ಪತ್ರೆಗಳಿಗೆ ತೆರಳಿ ವಿವಿಧ ಪರೀಕ್ಷೆಗಳಿಗೆ ಒಳಪಡಬೇಕು ಎಂದ ಅವರು, ಈ ಶೀತಜ್ವರ ಸಾಮಾನ್ಯವಾಗಿ ಐದು ದಿನಗಳವರೆಗೆ ಇರುತ್ತದೆ. ಹೀಗಾಗಿ ಯಾವ ಕಾರಣಕ್ಕೂ ಇದನ್ನು ನಿರ್ಲಕ್ಷಿಸಬಾರದು ಎಂದು ಹೇಳಿದರು. ವಯೋವೃದ್ಧರು ಮತ್ತು ಮಕ್ಕಳು ಎಚ್ಚರಿಕೆಯಿಂದ ಇರಬೇಕು. ಅದೇ ರೀತಿ ವಿವಿಧ ರೋಗಗಳಿಂದ ಬಳಲುತ್ತಿರುವವರು ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.
ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರಗಳನ್ನು ಬಳಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಆಗಾಗ ಕೈ ತೊಳೆಯುತ್ತಿರಬೇಕು ಎಂದು ಇದೇ ಸಂದರ್ಭದಲ್ಲಿ ಅವರು ಜನರಿಗೆ ಮನವಿ ಮಾಡಿಕೊಂಡರು. ಸೋಂಕಿಗೆ ಸಂಬಂಧಿಸಿದಂತೆ ನಿತ್ಯ ಅಧಿಕಾರಿಗಳು ನಿಗಾ ವಹಿಸುತ್ತಾರೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದ ಸಚಿವರು, ಇಷ್ಟೆಲ್ಲದರ ನಡುವೆಯೂ ಜನ ಆತಂಕಪಡುವ ಅಗತ್ಯವೇನಿಲ್ಲ. ಆದರೆ, ಸೋಂಕಿನ ಕುರಿತು ಎಚ್ಚರಿಕೆಯಿರಲಿ ಎಂದು ಸಲಹೆ ನೀಡಿದರು.
The advisory by the Karnataka government mentions the do's and don'ts to avoid any kind of infection. These include covering the mouth and nose while coughing or sneezing, frequent hand washing, avoiding unnecessary touching of the face, and using face masks in crowded places.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm