ಬ್ರೇಕಿಂಗ್ ನ್ಯೂಸ್
01-12-23 05:49 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ರಾಜಧಾನಿಯ ವಿವಿಧ ಶಾಲೆಗಳಿಗೆ ಇಂದು ಬಾಂಬ್ ಇಟ್ಟಿರುವುದಾಗಿ ಆಗಂತುಕರು ಬೆದರಿಕೆ ಹಾಕಿದ್ದಾರೆ. 15ಕ್ಕೂ ಹೆಚ್ಚು ಶಾಲೆಗಳ ಆಡಳಿತ ಮಂಡಳಿಯ ಇ-ಮೇಲ್ಗೆ ಬೆದರಿಕೆ ಸಂದೇಶ ರವಾನಿಸಲಾಗಿದೆ.
ಈ ಕುರಿತು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಪ್ರತಿಕ್ರಿಯಿಸಿ, ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಹಾಗೂ ಸ್ಕ್ವೈಡ್ಗಳನ್ನು ಕಳುಹಿಸಿ ತಪಾಸಣೆ ನಡೆಸಲಾಗುತ್ತದೆ. ಕಟ್ಟೆಚ್ಚರ ವಹಿಸುವಂತೆ ಸಚಿವರು ನಿರ್ದೇಶಿಸಿದ್ದಾರೆ. ಬೆದರಿಕೆ ಬಂದಿರುವ ಶಾಲೆಗಳಲ್ಲಿ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಕಳೆದ ವರ್ಷ ಕೂಡಾ ಬೆದರಿಕೆ ಬಂದಿತ್ತು. ಆಗ ನಮ್ಮ ಸಿಬ್ಬಂದಿ ಎಚ್ಚೆತ್ತುಕೊಂಡು ಆರೋಪಿಗಳನ್ನು ಪತ್ತೆ ಮಾಡಿದ್ದರು. ಅವುಗಳೆಲ್ಲವೂ ಹುಸಿ ಬೆದರಿಕೆ ಕರೆಗಳಾಗಿದ್ದವು. ಈ ಪ್ರಕರಣವನ್ನೂ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.
![]()
ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ:
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ನಗರ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇನೆ. ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶಿಲೀಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ. ತುಮಕೂರಿನಿಂದ ಬೆಂಗಳೂರಿಗೆ ವಾಪಸ್ ಆದ ನಂತರ ಇಲಾಖೆಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಪೋಷಕರು ಮತ್ತು ಮಕ್ಕಳು ಆತಂಕಪಡುವುದು ಬೇಡ ಎಂದು ತಿಳಿಸಿದ್ದಾರೆ.

ಡಿಸಿಎಂ ಶಿವಕುಮಾರ್ಪ್ರತಿಕ್ರಿಯಿಸಿ, ಹಿರಿಯ ಪೊಲೀಸ್ ಅಧಿಕಾರಿಗಳು ಸದಾಶಿವ ನಗರದ ನೀವ್ ಸ್ಕೂಲ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ತನಿಖೆ ನಡೆಸಲು ಸೂಚಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ:
ಬಸವೇಶ್ವರನಗರದ ಎನ್ಎಎಫ್ಎಲ್ ಶಾಲೆಗೆ ಭೇಟಿ ನೀಡಿದ ಬಳಿಕ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಪೊಲೀಸ್ ಕಮೀಷನರ್ ಜೊತೆ ಮಾತನಾಡಿದ್ದೇನೆ. ಟೈಪ್ ಮಾಡಿದ್ದನ್ನು ನೋಡಿದರೆ ಹೈ ಲೆವೆಲ್ ಟೆರರಿಸ್ಟ್ ರೀತಿ ಕಾಣುತ್ತಿದೆ. ಇವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಇಲ್ಲಿ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಬಂದಿದ್ದು, ಏನೂ ಸಿಕ್ಕಿಲ್ಲ. ಸದ್ಯ 15 ಶಾಲೆಗೆ ಬಾಂಬ್ ಮೇಲ್ ಬಂದಿದೆ. ಜನರಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ನಾನು ಕೂಡ ಭೇಟಿ ಮಾಡಿದ್ದೇನೆ ಎಂದರು.
BJP R Ashok says mail shows high level terrorist suspected on bomb mail to schools in Bangalore. Home Minister has ordered for high level probe in this case.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
18-04-26 11:09 pm
Mangalore Correspondent
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm