ಬ್ರೇಕಿಂಗ್ ನ್ಯೂಸ್
03-12-23 11:12 am HK News Desk ಕರ್ನಾಟಕ
ಮೈಸೂರು, ಡಿ.3: ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಪಕ್ಷದ ಸಂಘಟನೆಯಿಂದ ದೂರವಿಟ್ಟರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಉದ್ದಾರವಾಗಲಿದೆ ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಯಾರದ್ದೇ ಹೆಸರೇಳದೆ ಟಾಂಗ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗುಂಪುಗಾರಿಕೆ ರಾಜಕಾರಣ ನಿಲ್ಲಬೇಕಿದೆ, ನಮ್ಮ ಗುಂಪುಗಾರಿಕೆಯಿಂದಲೇ ನಾವು ಚುನಾವಣೆ ಸೋತಿರುವುದು. ಹೀಗಾಗಿ ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಸಂಘಟನೆಯಿಂದ ದೂರವಿಡಿ, ಆಗ ರಾಜ್ಯದಲ್ಲಿ ಪಕ್ಷ ಉದ್ದಾರ ಆಗುತ್ತದೆ. ಈ ಬಗ್ಗೆ ನಾನು ವಿಜಯೇಂದ್ರ ಅವರಿಗೆ ಸಲಹೆ ನೀಡಿದ್ದೇನೆ ಎಂದು ಹೇಳಿದರು. ಮೊದಲು ಅಸಮಾಧಾನ ಇರುವವರನ್ನು ಮನವೊಲಿಸಿ, ಸೋಮಣ್ಣ ಅವರ ಬಳಿ ಹೋಗಿ, ಯತ್ನಾಳ್ ಅವರನ್ನು ಭೇಟಿ ಮಾಡಿದ ಬಳಿಕ ಮಠ, ಮಂದಿರಕ್ಕೆ ಹೋಗಿ ಎಂದು ಸಲಹೆ ಮಾಡಿದರು.
ನನಗೆ ರಾಜ್ಯಾಧ್ಯಕ್ಷರಾಗಿರುವವರ ಕಷ್ಟ ಏನೆಂಬುದು ಗೊತ್ತಿದೆ. ನನ್ನ ಅವಧಿಯಲ್ಲಿಯೂ ಅನಂತ ಕುಮಾರ್, ಯಡಿಯೂರಪ್ಪ ಅವರ ಗುಂಪುಗಳಿದ್ದವು. ನಾನು ಪ್ರತಿ ದಿನ ಎಲ್ಲರ ಮನೆಗೆ ಹೋಗಿ ಬೆಣ್ಣೆ ಹಿಡಿದು ನೈಸ್ ಮಾಡಿದ್ದೆ, ಅದೇ ರೀತಿ ಎಲ್ಲರ ಮನವೊಲಿಸಿ. ನಿಮ್ಮ ತಂದೆಯ ಜತೆಗೆ ಉಳಿದ ಹಿರಿಯರ ಸಲಹೆ ಪಡೆಯಿರಿ ಎಂದ ಅವರು, ಮುಂದಿನ ಲೋಕಸಭೆಯಲ್ಲಿ ಯುವಕರಿಗೆ ಅವಕಾಶ ನೀಡುವ ಮೂಲಕ ಹೊಸ ರಾಜತಂತ್ರ ಜಾರಿಗೆ ತನ್ನಿ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸದಾನಂದ ಗೌಡ, ”ನನ್ನ ರಾಜಕೀಯ ಜೀವನದಲ್ಲಿ ಇಂತಹ ಸರಕಾರ ನೋಡಿಲ್ಲ. ನಾನು ಎಲ್ಲಾ ರೀತಿಯ ಅಧಿಕಾರ ಅನುಭವಿಸಿದ್ದೇನ, ಆದರೆ ಈ ರೀತಿಯ ಸರಕಾರ ನೋಡಿಲ್ಲ. ಇದು ಕರ್ನಾಟಕದ ಜನರ ಪಾಪಕ್ಕೆ ಬಂದ ಸರಕಾರವಾಗಿದ್ದು, ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ಡಿ.ಕೆ. ಶಿವಕುಮಾರ್ ಅವರ ಮೇಲಿನ ಸಿಬಿಐ ತನಿಖೆಯನ್ನು ಹಿಂಪಡೆದ ನಿರ್ಧಾರದ ಬಗ್ಗೆ ಮಾತನಾಡಿ, ”ನಾನೂ ಕಾನೂನು ಮಂತ್ರಿಯಾಗಿದ್ದವನು, ಈ ರೀತಿಯ ಕೆಲಸ ಸರಕಾರ ಮಾಡಬಾರದು. ಈ ವಿಷಯದಲ್ಲಿ ಸಿದ್ದರಾಮಯ್ಯ ಅವರಿಗೂ ತೃಪ್ತಿ ಇಲ್ಲ ಎಂದರು.
D.V. Sadananda Gowda in Mysuru, says stop having group politics slams members and that's the reason we have lost our power in Karnataka he added.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
18-04-26 11:09 pm
Mangalore Correspondent
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm