ಬ್ರೇಕಿಂಗ್ ನ್ಯೂಸ್
03-12-23 11:12 am HK News Desk ಕರ್ನಾಟಕ
ಮೈಸೂರು, ಡಿ.3: ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಪಕ್ಷದ ಸಂಘಟನೆಯಿಂದ ದೂರವಿಟ್ಟರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಉದ್ದಾರವಾಗಲಿದೆ ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಯಾರದ್ದೇ ಹೆಸರೇಳದೆ ಟಾಂಗ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗುಂಪುಗಾರಿಕೆ ರಾಜಕಾರಣ ನಿಲ್ಲಬೇಕಿದೆ, ನಮ್ಮ ಗುಂಪುಗಾರಿಕೆಯಿಂದಲೇ ನಾವು ಚುನಾವಣೆ ಸೋತಿರುವುದು. ಹೀಗಾಗಿ ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಸಂಘಟನೆಯಿಂದ ದೂರವಿಡಿ, ಆಗ ರಾಜ್ಯದಲ್ಲಿ ಪಕ್ಷ ಉದ್ದಾರ ಆಗುತ್ತದೆ. ಈ ಬಗ್ಗೆ ನಾನು ವಿಜಯೇಂದ್ರ ಅವರಿಗೆ ಸಲಹೆ ನೀಡಿದ್ದೇನೆ ಎಂದು ಹೇಳಿದರು. ಮೊದಲು ಅಸಮಾಧಾನ ಇರುವವರನ್ನು ಮನವೊಲಿಸಿ, ಸೋಮಣ್ಣ ಅವರ ಬಳಿ ಹೋಗಿ, ಯತ್ನಾಳ್ ಅವರನ್ನು ಭೇಟಿ ಮಾಡಿದ ಬಳಿಕ ಮಠ, ಮಂದಿರಕ್ಕೆ ಹೋಗಿ ಎಂದು ಸಲಹೆ ಮಾಡಿದರು.
ನನಗೆ ರಾಜ್ಯಾಧ್ಯಕ್ಷರಾಗಿರುವವರ ಕಷ್ಟ ಏನೆಂಬುದು ಗೊತ್ತಿದೆ. ನನ್ನ ಅವಧಿಯಲ್ಲಿಯೂ ಅನಂತ ಕುಮಾರ್, ಯಡಿಯೂರಪ್ಪ ಅವರ ಗುಂಪುಗಳಿದ್ದವು. ನಾನು ಪ್ರತಿ ದಿನ ಎಲ್ಲರ ಮನೆಗೆ ಹೋಗಿ ಬೆಣ್ಣೆ ಹಿಡಿದು ನೈಸ್ ಮಾಡಿದ್ದೆ, ಅದೇ ರೀತಿ ಎಲ್ಲರ ಮನವೊಲಿಸಿ. ನಿಮ್ಮ ತಂದೆಯ ಜತೆಗೆ ಉಳಿದ ಹಿರಿಯರ ಸಲಹೆ ಪಡೆಯಿರಿ ಎಂದ ಅವರು, ಮುಂದಿನ ಲೋಕಸಭೆಯಲ್ಲಿ ಯುವಕರಿಗೆ ಅವಕಾಶ ನೀಡುವ ಮೂಲಕ ಹೊಸ ರಾಜತಂತ್ರ ಜಾರಿಗೆ ತನ್ನಿ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸದಾನಂದ ಗೌಡ, ”ನನ್ನ ರಾಜಕೀಯ ಜೀವನದಲ್ಲಿ ಇಂತಹ ಸರಕಾರ ನೋಡಿಲ್ಲ. ನಾನು ಎಲ್ಲಾ ರೀತಿಯ ಅಧಿಕಾರ ಅನುಭವಿಸಿದ್ದೇನ, ಆದರೆ ಈ ರೀತಿಯ ಸರಕಾರ ನೋಡಿಲ್ಲ. ಇದು ಕರ್ನಾಟಕದ ಜನರ ಪಾಪಕ್ಕೆ ಬಂದ ಸರಕಾರವಾಗಿದ್ದು, ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ಡಿ.ಕೆ. ಶಿವಕುಮಾರ್ ಅವರ ಮೇಲಿನ ಸಿಬಿಐ ತನಿಖೆಯನ್ನು ಹಿಂಪಡೆದ ನಿರ್ಧಾರದ ಬಗ್ಗೆ ಮಾತನಾಡಿ, ”ನಾನೂ ಕಾನೂನು ಮಂತ್ರಿಯಾಗಿದ್ದವನು, ಈ ರೀತಿಯ ಕೆಲಸ ಸರಕಾರ ಮಾಡಬಾರದು. ಈ ವಿಷಯದಲ್ಲಿ ಸಿದ್ದರಾಮಯ್ಯ ಅವರಿಗೂ ತೃಪ್ತಿ ಇಲ್ಲ ಎಂದರು.
D.V. Sadananda Gowda in Mysuru, says stop having group politics slams members and that's the reason we have lost our power in Karnataka he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am