ಬ್ರೇಕಿಂಗ್ ನ್ಯೂಸ್
04-12-23 04:41 pm HK News Desk ಕರ್ನಾಟಕ
ಮೈಸೂರು, ಡಿ 04: ಬೈಕ್ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್ ನಾಯಕ ಭವಾನಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವ್ಯಾಚ ಶಬ್ಧಗಳಲ್ಲಿ ಬೈದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ ತಪ್ಪಾದ ಮಾರ್ಗದಲ್ಲಿ ಬಂದು ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರಿನ ಮುಂಭಾಗಕ್ಕೆ ತುಸು ಹಾನಿಯಾಗಿದೆ. ಘಟನೆ ನಡೆಯುತ್ತಿದ್ದಂತೆ ಕಾರಿನಿಂದ ಇಳಿದ ಭವಾನಿ ರೇವಣ್ಣ ಅವರು ಬೈಕ್ ಸವಾರನನ್ನು ಬಾಯಿಗೆ ಬಂದಂತೆ ಬೈದಿದ್ದಾರೆ

ಭವಾನಿ ಅವರು ಕಾರಿನಿಂದ ಕೆಳಗಿಳಿದು ಬಂದು ಬೈಕ್ ಸವಾರ ಆರೋಗ್ಯ ವಿಚಾರಿಸಲಿಲ್ಲ. ಹಿಗ್ಗಾಮುಗ್ಗಾ ಬೈದದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸಾಯೋಕೆ 1.5 ಕೋಟಿ ಕಾರೇ ಆಗಬೇಕಿತ್ತಾ, ಸುಟ್ರು ಹಾಕ್ರೋ ಈ ಗಾಡಿನ ಎಂದು ಬೈಕ್ ಸವಾರನಿಗೆ ತರಾಟೆಗೆ ತೆಗೆದುಕೊಂಡರು.
ಕೊಡ್ತೀಯಾ 50 ಲಕ್ಷ ರಿಪೇರಿಗೆ ? ;
ವಾಹನದ ಮುಂಭಾಗ ಡ್ಯಾಮೇಜ್ ಆಗಿರುವುದು ನೋಡಿದ ಭವಾನಿ ರೇವಣ್ಣ ಅವರು ಬೈಕ್ ಸವಾರನ ಮೊಬೈಲ್ ಕಸಿದುಕೊಂಡು ಬೈಕ್ ಕೀ ಕಿತ್ತುಕೊಂಡರು. " ನಿನಗೆ ಅಂತಹ ಅರ್ಜೆಂಟ್ ಏನಿತ್ತು? ಗಾಡಿಗೆ ಎಷ್ಟು ಡ್ಯಾಮೇಜ್ ಆಗಿದೆ. ರೆಡಿ ಮಾಡಿಸುವುದು ಹೇಗೆ?’ ಎಂದು ಕೇಳಿದರು. ಅಲ್ಲದೇ, ‘ಬಿಟ್ಬಿಡಿ ಅಕ್ಕ’ ಎಂದು ಮಧ್ಯಪ್ರವೇಶಿಸಿದ ಸ್ಥಳೀಯರನ್ನು, ‘ಕೊಡ್ತಿಯಾ ₹ 50 ಲಕ್ಷ ರಿಪೇರಿ ಮಾಡಿಸೋಕೆ? ಸ್ಥಳದಲ್ಲಿರುವವರು ಹಣ ಕೊಡಂಗಿದ್ರೆ ನ್ಯಾಯ ಮಾತಾಡಕ್ಕೆ ಬನ್ನಿ’ ಎಂದು ಸೇರಿದ್ದವರನ್ನು ಕೂಡ ಭವಾನಿ ರೇವಣ್ಣ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೈಕ್ ಸವಾರ ಸತ್ತೋಯ್ತಾನೆ ಅಂತ ಅವನ ಬಗ್ಗೆ ಯೋಚೆ ಮಾಡ್ತಾ ಇದ್ದೀಯಲ್ಲಾ, ಒಂದೂವರೆ ಕೋಟಿ ರೂ. ಗಾಡಿ ಡ್ಯಾಮೇಜ್ ಯಾರ್ ಕಟ್ಟಿಕೊಡ್ತಾರೆ ?’ ಎಂದೂ ಸ್ಥಳೀಯರ ವಿರುದ್ಧ ಭವಾನಿ ರೇವಣ್ಣ ಕೆಂಡಾಮಂಡಲವಾದರು.
ದೇಶ ಮುಳುಗಿ ಹೋಗಿತ್ತಾ, ರೈಟಲ್ಲಿ ಬಂದು ಗುದ್ದಿದ್ದೀಯಲ್ಲಾ, ಒಂದೂವರೆ ಕೋಟಿ ಗಾಡಿ ಇದು. ಡ್ಯಾಮೇಜ್ ಮಾಡಿದ್ದೀಯಲ್ಲ, ಸಾಯಂಗಿದ್ರೆ ಬಸ್ಗೆ ಸಿಕ್ಕಾಕೊಂಡು ಸಾಯಬೇಕಿತ್ತು. ನನ್ನ ಕಾರ್ ಡ್ಯಾಮೇಜ್ ಮಾಡೋಕೆ ನೀನ್ಯಾವನು?’ ಎಂದು ವಾಹನ ಸವಾರರ ವಿರುದ್ಧ ಹರಿಹಾಯ್ದರು.
ಸಾಲಿಗ್ರಾಮ ಪೊಲೀಸ್ ಠಾಣೆಯ ಸಿಪಿಐ ಜಿ.ಕೃಷ್ಣರಾಜು ಸ್ಥಳಕ್ಕೆ ಭೇಟಿ ನೀಡಿದ್ದರು. ಬೈಕ್ ಸವಾರ ಶಿವಣ್ಣ ಅವರ ವಿರುದ್ಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ
ಭವಾನಿ ರೇವಣ್ಣ ಕಾರು ಅಪಘಾತ - ರಿಯಾಕ್ಷನ್ ಹೀಗಿತ್ತು ನೋಡಿ... #Bhavanirevanna #hdrevanna #mysore #toyotafortuner #caraccident #hassan #Toyota #AccidenteVial #Karnataka #Yash19 #jds #jdskarnataka #hdkumaraswamy pic.twitter.com/fSiClX0cG5
— Newspostmortem (@NPnewskannada) December 3, 2023
Bhavani Revanna car accident, video of abusing bike rider goes viral. An undated, purported video of Bhavani Revanna, the daughter-in-law of former Prime Minister HD Deve Gowda, which showed her yelling at villagers after a biker rammed his vehicle into her car has gone viral on social media.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm