ಬ್ರೇಕಿಂಗ್ ನ್ಯೂಸ್
04-12-23 08:56 pm HK News Desk ಕರ್ನಾಟಕ
ಬೆಳಗಾವಿ, ಡಿ.4: ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು ಜನವರಿಯಿಂದ ಶಾಲೆ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೇ ಮೊದಲ ಬಾರಿಗೆ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್ ಗಳನ್ನ ವಿತರಿಸಲು ನಿರ್ಧರಿಸಲಾಗಿದೆ ಎಂದರು.
ಶುಚಿ ಒಂದು ಮಹತ್ವವಾದ ಯೋಜನೆ. ಹೆಣ್ಣುಮಕ್ಕಳಿಗೆ ಇದು ಅತ್ಯಗತ್ಯವಾಗಿದೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಬೇರೆ ಬೇರೆ ಕಾರಣಗಳಿಗೆ ಯೋಜನೆ ಸ್ಥಗಿತವಾಗಿತ್ತು. ನಮ್ಮ ಸರ್ಕಾರ ಬಂದ ಬಳಿಕ ಶುಚಿ ಯೋಜನೆಗೆ ಮರುಚಾಲನೆ ನೀಡುತ್ತಿದ್ದೇವೆ. ಈಗಾಗಲೇ ನಾಲ್ಕು ವಿಭಾಗವಾರು ಟೆಂಡರ್ ಆಹ್ವಾನಿಸಿ ಬಹುತೇಕ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.
10 ವರ್ಷದಿಂದ 18 ವರ್ಷದ ಒಳಗಿನ ಸುಮಾರು 19 ಲಕ್ಷ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲು ಯೋಜಿಸಲಾಗಿದೆ. ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳಿಗು ನ್ಯಾಪ್ಕಿನ್ ಗಳನ್ನ ವಿತರಿಸಲಾಗುವುದು. ಈ ಮೊದಲು ಸರ್ಕಾರಿ ಆಸ್ಪತ್ರೆಯ ಮೂಲಕ ನ್ಯಾಪ್ಕಿನ್ ಗಳನ್ನ ವಿತರಿಸಲಾಗುತ್ತಿತ್ತು. ಈ ಬಾರಿ ನೇರವಾಗಿ ಶಾಲೆಗೆ ತೆರಳಿ ವಿದ್ಯಾರ್ಥಿನಿಯರಿಗೆ ನ್ಯಾಪ್ಕನ್ ಗಳನ್ನ ವಿತರಿಸುವಂತೆ ಏಜನ್ಸಿಯವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
40.50 ಕೋಟಿ ಯೋಜನೆ ಇದಾಗಿದ್ದು, ಸಂಪೂರ್ಣ ಹಣಕಾಸನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ. ಕೇಂದ್ರ ಸರ್ಕಾರದಿಂದ ಈ ಯೋಜನೆಗೆ ನೆರವು ಸಿಕ್ಕಿಲ್ಲ ಎಂದು ಸ್ಪಷ್ಟಪಡಿಸಿದ ಗುಂಡೂರಾವ್, ಪ್ರಾಯೋಗಿಕವಾಗಿ ಮೆನ್ ಸ್ಟ್ರುವಲ್ ಮುಟ್ಟಿನ ಕಪ್ ಗಳನ್ನ ದಕ್ಷಿಣ ಕನ್ನಡ, ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 15 ಸಾವಿರ ಮುಟ್ಟಿನ ಕಪ್ ಗಳನ್ನ ವಿತರಿಸಲಾಗಿದೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has said that the swachhta scheme, which was stalled for four years, will be revived and napkins will be distributed to school girls from January.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am