ಬ್ರೇಕಿಂಗ್ ನ್ಯೂಸ್
04-12-23 10:29 pm HK News Desk ಕರ್ನಾಟಕ
ಬೆಳಗಾವಿ, ಡಿ.4: ಡಿಸೆಂಬರ್ 23ರಂದು ನಡೆಸಲು ನಿಗದಿಪಡಿಸಿದ್ದ 545 ಪಿಎಸ್ಐ ನೇಮಕಾತಿ ಮರು ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಲಾಗಿದೆ. ಇದೀಗ ಜನವರಿ 23ಕ್ಕೆ ಮರು ಪರೀಕ್ಷೆಯನ್ನು ಮುಂದೂಡಲಾಗಿದೆ.
ಬೆಳಗಾವಿಯ ಸುವರ್ಣ ಸೌಧದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಚರ್ಚೆ ನಡೆಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಪಿಎಸ್ಐ ಮರು ಪರೀಕ್ಷೆಯನ್ನು ಜನವರಿ 23ಕ್ಕೆ ಮುಂದೂಡಲಾಗಿದೆ. ಇನ್ನೇನು ಅಧಿಕೃತ ಆದೇಶ ಹೊರಬೀಳೋದು ಬಾಕಿ ಇದೆ.
ಪರೀಕ್ಷೆ ಮುಂದೂಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಸೇರಿದಂತೆ ಹಲವರಿಗೆ ಶಾಸಕರಾದ ಎಸ್. ಶರಣಗೌಡ ಪಾಟೀಲ್, ಬಸನಗೌಡ ತುರುವಿಹಾಳ ಪತ್ರ ಬರೆದಿದ್ದರು. ಪತ್ರದಲ್ಲಿ ಡಿ.23ರಂದು 545 ಪಿಎಸ್ಐ ನೇಮಕಾತಿಗಾಗಿ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಹೀಗೆ ನಿಗದಿ ಪಡಿಸಿರುವಂತ ಪರೀಕ್ಷೆಗೆ ತಯಾರಿ ಆಗೋದಕ್ಕೆ ಕೇವಲ 20 ದಿನಗಳಿವೆ. ತುಂಬಾ ಕಡಿಮೆ ಅವಧಿಯಲ್ಲಿ ಪರೀಕ್ಷೆ ನಿಗದಿ ಪಡಿಸಲಾಗಿದೆ.
ಕೇವಲ 20 ದಿನಗಳಲ್ಲಿ ಓದಿ ಪಿಎಸ್ಐ ಪರೀಕ್ಷೆ ಎದುರಿಸೋದು ಅಭ್ಯರ್ಥಿಗಳಿಗೆ ಕಷ್ಟವಾಗಲಿದೆ. ಕನಿಷ್ಠ ಮೂರು ತಿಂಗಳು ಪರೀಕ್ಷೆ ಮುಂದೂಡುವಂತೆ ಶಾಸಕರು ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿಯಲ್ಲಿ ಮನವಿ ಮಾಡಿದ್ದರು.
ಅಂದಹಾಗೇ ಡಿ.23ರಂದು 545 ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಮಾತ್ರವೇ ಈ ಬಾರಿ ಪಿಎಸ್ಐ ಮರು ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿ ಆದೇಶಿಸಿತ್ತು. ಈ ಮರು ಪರೀಕ್ಷೆಯಲ್ಲಿ ಈಗ ಒಂದು ತಿಂಗಳು ಅಂದರೆ ಜನವರಿ 23ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
The 545 PSI recruitment re-examination scheduled to be held on December 23 has been postponed by one month. Now the re-examination has been postponed to January 23. Home Minister Dr. G Parameshwar held a discussion on this with Chief Minister Siddaramaiah in the session of Suvarna Soudha in Belagavi today.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am