ಬ್ರೇಕಿಂಗ್ ನ್ಯೂಸ್
05-12-23 10:54 am Bangalore Correspondent ಕರ್ನಾಟಕ
ಬೆಂಗಳೂರು, ಡಿ 05: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ.
13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲಿ 3 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ 3 ಕಡೆಯಾದರೆ, ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿಯೂ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಸಂಬಂಧ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಇನ್ನು ಮುಖ್ಯವಾಗಿ ದಾಳಿಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಪತ್ನಿಯ ಸಹೋದರ, ಯಾದಗಿರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ ಪ್ರಭುಲಿಂಗ್ ಮಾನಕರ್ ಅವರ ಮನೆ, ಪಾರ್ಮ್ ಹೌಸ್, ಕಚೇರಿಗಳ ಮೇಲೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ಡಾ ಪ್ರಭುಲಿಂಗ್ ಅವರ ನಿವಾಸ, ಯಾದಗಿರಿಯ ಮನೆ, ಕಚೇರಿ ಮತ್ತು ಕಲಬುರಗಿ ಸಮೀಪದ ಫಾರ್ಮ ಹೌಸ್ ಮೇಲೆ ಲೋಕಾಯುಕ್ತ ಎಸ್ ಪಿ ಕರ್ನುಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
Lokayukta raid in 63 places of Karnataka including three places in Bangalore. The police wing of the anti-corruption ombudsman began simultaneous raids with multiple teams on at least 60 government officials in different parts of the state, including three in Bengaluru.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm