ಬ್ರೇಕಿಂಗ್ ನ್ಯೂಸ್
05-12-23 05:08 pm HK News Desk ಕರ್ನಾಟಕ
ಹಾಸನ, ಡಿ 05: "ಅರ್ಜುನ ಆನೆಯನ್ನು ಅನ್ಯಾಯವಾಗಿ ಸಾಯಿಸಿದ್ರಿ; ಸತ್ತ ಮೇಲಾದರು ನ್ಯಾಯ ಕೊಡಿಸಿ " ಎಂದು ಅರಣ್ಯ ಇಲಾಖೆಗೆ ಧಿಕ್ಕಾರ ಹಾಕುತ್ತಾ ಸ್ಥಳೀಯರು ಅರ್ಜುನ ಆನೆ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ ನಡೆಸಿದರು.
ಒಂಟಿ ಸಲಗ ಸೆರೆ ಕಾರ್ಯಾಚರಣೆಯ ವೇಳೆ ಮೃತಪಟ್ಟಿದ್ದ ಅರ್ಜುನ ಆನೆಯನ್ನು ಮೃತಪಟ್ಟ ಸ್ಥಳ ಹಾಸನದ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡು ತೋಪಿನಲ್ಲಿಯೇ ಗುಂಡಿ ತೋಡಿಸಿ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಇದಕ್ಕೆ ಸ್ಥಳೀಯರು ಹಾಗೂ ಮಾವುತರು ವಿರೋಧ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳ ಅಚಾತುರ್ಯದಿಂದ ಅರ್ಜುನ ಆನೆ ಸಾವಾಗಿದೆ. ಆನೆಯ ಸಾವಿನ ನಂತರವಾದರೂ ಸೂಕ್ತ ಸ್ಥಳದಲ್ಲಿ ಅಂದರೆ, ಆನೆ ಹುಟ್ಟಿ ಬೆಳೆದ ಬಳ್ಳೆ ಸಾಕಾನೆ ಶಿಬಿರದಲ್ಲಿ ಅಂತ್ಯ ಸಂಸ್ಕಾರ ಮಾಡಿ ಸ್ಮಾರಕ ಮಾಡುವ ಮೂಲಕ ನ್ಯಾಯ ಒದಗಿಸಿ ಎಂದು ಮಾವುತವು ಹಾಗೂ ಸ್ಥಳೀಯರು ಪ್ರಾಣಿ ಪ್ರಿಯರು ಒತ್ತಾಯಿಸಿದ್ದಾರೆ. ಆದರೂ, ಅರಣ್ಯ ಇಲಾಖೆ ಕಿವಿಗೊಡದೇ ಅಂತ್ಯ ಸಂಸ್ಕಾರ ಮಾಡಿದೆ. ಸೂಕ್ತ ಸ್ಥಳದಲ್ಲಿ ಅಂತ್ಯಕ್ರಿಯೆಗೆ ಆಗ್ರಹಿಸಿದ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿ ಓಡಿಸಿದ್ದಾರೆ.

ಅರ್ಜುನ ಆನೆ ಸಾವಿನ ಬಗ್ಗೆ ಮಾವುತರೊಬ್ಬರು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
“ ಸೆರೆ ಹಿಡಿಯಬೇಕಿದ್ದ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಲು ಇಂಜೆಕ್ಷನ್ ಶೂಟ್ ಮಾಡಲಾಗಿತ್ತು. ಅದು ಗುರಿ ತಪ್ಪಿ ಪ್ರಶಾಂತ್ ಎಂಬ ಸಾಕಾನೆ ಮೇಲೆ ಬಿತ್ತು. ನಂತರ, ಬೇರೊಂದು ಇಂಜೆಕ್ಷನ್ ನೀಡಿ ಅದನ್ನು ಸುಧಾರಿಸಲಾಯಿತು. ಆ ವೇಳೆಗೆ, ಕಾಡಾನೆ ಮೇಲೆ ಅರ್ಜುನ ದಾಳಿ ಮಾಡಿತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದರು. ಆ ಗುಂಡು ಅಚಾನಕ್ಕಾಗಿ ಅರ್ಜುನನ ಕಾಲಿಗೆ ಬಿದ್ದಿತು. ಗುಂಡು ತಗುಲಿದ್ದರಿಂದ ಅರ್ಜುನ ಸುತ್ತಮುತ್ತಲಿದ್ದ ಮರಗಳನ್ನು ಬೀಳಿಸಿತು. ಅರ್ಜುನ ಆನೆ ನಡೆಯಲಾಗದ ಪರಿಸ್ಥಿತಿಯಲ್ಲಿತ್ತು. ಈ ವೇಳೆ, ಸೆರೆ ಹಿಡಿಯಬೇಕಿದ್ದ ಕಾಡಾನೆಯೇ ಅರ್ಜುನನ ಮೇಲೆ ದಾಳಿ ಮಾಡಿತು” ಎಂದು ಮಾವುತ ವಿಡಿಯೋದಲ್ಲಿ ಹೇಳಿದ್ದಾರೆ.
ವನ್ಯಜೀವಿ ಪ್ರಿಯರು ಹಾಗೂ ಹೋರಾಟಗಾರರು ಅರ್ಜುನ ಆನೆಯ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಒತ್ತಾಯಿಸಿದ್ದಾರೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಬೆಂಗಳೂರಿನ ಮಲ್ಲೇಶ್ವರದಲ್ಲಿ ಮಂಗಳವಾರ ಸಂಜೆ 4ಗಂಟೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. 'ಅಂಬಾರಿ ಆನೆ ಅರ್ಜುನ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು. ತಪ್ಪಿತಸ್ಥರಿಗೆ ಶಿಕ್ಷ ಆಗಬೇಕು' ಎಂದು ಆಗ್ರಹಿಸಿದ್ದಾರೆ.
ವನ್ಯ ಜೀವಿ ತಜ್ಞರು ಹೇಳುವಂತೆ, ವಯಸ್ಸಾದ ಕಾರಣಕ್ಕೆ ಅರ್ಜುನನಿಗೆ ಅಂಬಾರಿ ಹೋರುವುದನ್ನೇ ನಿಲ್ಲಿಸಲಾಗಿದೆ. 64 ವರ್ಷದ ಅರ್ಜುನನ್ನು ಕಾಡಿನ ಪುಂಡಾನೆ/ ಒಂಟಿ ಸಲಗಗಳ ಸೆರೆ ಕಾರ್ಯಾಚರಣೆಗೆ ಬಳಸಬಾರದಿತ್ತು. ಅರಣ್ಯ ಇಲಾಖೆ ಕಾರ್ಯಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ.
Hassan Elephant arjuna death, mahouts and villagers protest over cremation, police laticharge.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm