ಬ್ರೇಕಿಂಗ್ ನ್ಯೂಸ್
07-12-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 07: ಪ್ರೀತಿಸಿದ ಹುಡುಗಿ ಏಕಾಏಕಿ ಪ್ರೀತಿಯನ್ನು ನಿರಾಕರಿಸಿ ಬಿಟ್ಟು ಹೋಗಿದ್ದಕ್ಕೆ ಮನನೊಂದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ.
ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ರಾಕೇಶ್ ಮೃತ ದುರ್ದೈವಿ. ರಾಕೇಶ್ ಐದಾರು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇಬ್ಬರು ಪಾರ್ಕ್, ಸಿನಿಮಾ ಎಂದು ಊರು ಊರು ತಿರುಗಿದ್ದರು. ಆದರೆ ಇತ್ತೀಚೆಗೆ ರಾಕೇಶ್ನನ್ನು ಯುವತಿ ಅವಾಯ್ಡ್ ಮಾಡಲು ಶುರು ಮಾಡಿದ್ದಳು.
ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದವಳು ಏಕಾಏಕಿ ದೂರಾಗಿದ್ದಳು. ಮಸೇಜ್, ಫೋನ್ ಕಾಲ್ಗೂ ರೆಸ್ಪಾನ್ಸ್ ಮಾಡುತ್ತಿರಲಿಲ್ಲ. ಈ ನಡುವೆ ಬೇರೆ ಯುವಕನ ಜತೆ ಮದುವೆಗೆ ಸಿದ್ಧತೆಯನ್ನು ನಡೆಸಿದ್ದಳು. ಈ ವಿಷಯ ತಿಳಿದು ನಿನ್ನೆ ಬುಧವಾರ ರಾಕೇಶ್ ನೇರ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ. ಈ ವೇಳೆ ರಾಕೇಶ್ ಹಾಗೂ ಯುವತಿ ನಡುವೆ ಗಲಾಟೆ ಆಗಿತ್ತು.
ಪ್ರೀತಿಸಿದವಳು ಮೋಸ ಮಾಡಿಬಿಟ್ಟಳೆಂದು ಮನನೊಂದಿದ್ದ ರಾಕೇಶ್, ಮನೆಗೆ ಬಂದವನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ಗಾಯಾಳು ರಾಕೇಶ್ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಬೆಂಕಿ ತೀವ್ರತೆಗೆ ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ಬುಧವಾರ ರಾತ್ರಿಯೇ ಮೃತಪಟ್ಟಿದ್ದಾನೆ. ರಾಕೇಶ್ ಕುಟುಂಬಸ್ಥರು ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
Bangalore youth sets himself fire after lover girl ends relationship. A young man committed suicide by setting himself on fire in Bengaluru after the woman he loved decided to marry someone else, police said. The deceased man Rakesh was a resident of Kottigepalya in Kengeri locality.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm