ಬ್ರೇಕಿಂಗ್ ನ್ಯೂಸ್
08-12-23 11:28 am HK News Desk ಕರ್ನಾಟಕ
ಚಿತ್ರದುರ್ಗ, ಡಿ 08: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮದುವೆ ಕ್ಯಾನ್ಸಲ್ ಆಗಿದೆ. ವರ ತಾಳಿಕಟ್ಟುವಾಗ ವಧು ತಾಳಿಗೆ ಕೈ ಅಡ್ಡ ಹಿಡಿದು ತಡೆದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಚಿಕ್ಕಬ್ಯಾಲದಕೆರೆ ಗ್ರಾಮದ ಮಂಜುನಾಥ್ ಹಾಗೂ ಚಳ್ಳಕೆರೆ ತಾಲೂಕಿನ ತಿಪ್ಪರೆಡ್ಡಿಹಳ್ಳಿಯ ಐಶ್ವರ್ಯಾ ಜೊತೆ ವಿವಾಹ ಫಿಕ್ಸ್ ಆಗಿತ್ತು. ಆದರೆ ಗುರುವಾರ ಬೆಳಗ್ಗೆ ಗ್ರಾಮದ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಯ ಮುಹೂರ್ತ ನಡೆಯುವ ವೇಳೆ ವರನಿಗೆ ವಧು ಶಾಕ್ ನೀಡಿದ್ದಾಳೆ. ವರ ತಾಳಿಕಟ್ಟುವ ವೇಳೆ ಮಂಜುನಾಥ್ ನನಗೆ ಇಷ್ಟ ಇಲ್ಲವೆಂದು ಹೇಳಿದ್ದಾಳೆ. ಯುವತಿ ನಡೆಗೆ ಯುವಕನ ಸಂಬಂಧಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಆಗ ಯುವತಿ ಮನೆಯವರು ಹಾಗೂ ಯುವಕನ ಕುಟುಂಬಸ್ಥರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಎರಡು ಕಡೆಯ ಸಂಬಂಧಿಗಳು ವಧುವಿನ ಮನವೊಲಿಸಲು ಯತ್ನಿಸಿದ್ರು ಕೂಡ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮದುವೆ ಮುರಿದುಬಿದ್ದಿದೆ. ಮದುವೆಗೆ ಆಗಮಿಸಿದ ಜನರು, ಸಂಬಂಧಿಗಳು ವಧುಗೆ ಹಿಡಿಶಾಪ ಹಾಕಿದ್ದಾರೆ. ವರನ ಕನಸು ನುಚ್ಚು ನೂರು ಮಾಡಿದಳು. ಮೊದಲೇ ತಿಳಿಸಿದ್ರೆ ಸಮಸ್ಯೆ ಎದುರಾಗ್ತಿರಲಿಲ್ಲ ಅಂತ ಹಿಡಿಶಾಪ ಹಾಕಿದ್ದಾರೆ.
ಮದುವೆ ನಿರಾಕರಣೆಗೆ ಈವರೆಗೆ ಕಾರಣ ತಿಳಿದುಬಂದಿಲ್ಲ. ಆದರೆ ಕುಟುಂಬಸ್ಥರ ಒತ್ತಾಯದ ಮೇರೆಗೆ ಮದುವೆಗೆ ಯುವತಿ ಸಮ್ಮತಿಸಿದ್ದು, ಆಕೆ ತಾಳಿಕಟ್ಟುವ ವೇಳೆ ಧೈರ್ಯ ಮಾಡಿ ವಿವಾಹ ನಿರಾಕರಿಸಿದ್ದಾಳೆಂಬ ಮಾತುಗಳು ಕೇಳಿಬಂದಿವೆ. ಸದ್ಯ ಪ್ರಕರಣ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Bride rejects bridegroom on the day of wedding on stage at Chitradurga, video goes viral.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
18-04-26 08:10 pm
HK News Staffer
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm