ಬ್ರೇಕಿಂಗ್ ನ್ಯೂಸ್
08-12-23 11:28 am HK News Desk ಕರ್ನಾಟಕ
ಚಿತ್ರದುರ್ಗ, ಡಿ 08: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮದುವೆ ಕ್ಯಾನ್ಸಲ್ ಆಗಿದೆ. ವರ ತಾಳಿಕಟ್ಟುವಾಗ ವಧು ತಾಳಿಗೆ ಕೈ ಅಡ್ಡ ಹಿಡಿದು ತಡೆದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಚಿಕ್ಕಬ್ಯಾಲದಕೆರೆ ಗ್ರಾಮದ ಮಂಜುನಾಥ್ ಹಾಗೂ ಚಳ್ಳಕೆರೆ ತಾಲೂಕಿನ ತಿಪ್ಪರೆಡ್ಡಿಹಳ್ಳಿಯ ಐಶ್ವರ್ಯಾ ಜೊತೆ ವಿವಾಹ ಫಿಕ್ಸ್ ಆಗಿತ್ತು. ಆದರೆ ಗುರುವಾರ ಬೆಳಗ್ಗೆ ಗ್ರಾಮದ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಯ ಮುಹೂರ್ತ ನಡೆಯುವ ವೇಳೆ ವರನಿಗೆ ವಧು ಶಾಕ್ ನೀಡಿದ್ದಾಳೆ. ವರ ತಾಳಿಕಟ್ಟುವ ವೇಳೆ ಮಂಜುನಾಥ್ ನನಗೆ ಇಷ್ಟ ಇಲ್ಲವೆಂದು ಹೇಳಿದ್ದಾಳೆ. ಯುವತಿ ನಡೆಗೆ ಯುವಕನ ಸಂಬಂಧಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಆಗ ಯುವತಿ ಮನೆಯವರು ಹಾಗೂ ಯುವಕನ ಕುಟುಂಬಸ್ಥರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಎರಡು ಕಡೆಯ ಸಂಬಂಧಿಗಳು ವಧುವಿನ ಮನವೊಲಿಸಲು ಯತ್ನಿಸಿದ್ರು ಕೂಡ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮದುವೆ ಮುರಿದುಬಿದ್ದಿದೆ. ಮದುವೆಗೆ ಆಗಮಿಸಿದ ಜನರು, ಸಂಬಂಧಿಗಳು ವಧುಗೆ ಹಿಡಿಶಾಪ ಹಾಕಿದ್ದಾರೆ. ವರನ ಕನಸು ನುಚ್ಚು ನೂರು ಮಾಡಿದಳು. ಮೊದಲೇ ತಿಳಿಸಿದ್ರೆ ಸಮಸ್ಯೆ ಎದುರಾಗ್ತಿರಲಿಲ್ಲ ಅಂತ ಹಿಡಿಶಾಪ ಹಾಕಿದ್ದಾರೆ.
ಮದುವೆ ನಿರಾಕರಣೆಗೆ ಈವರೆಗೆ ಕಾರಣ ತಿಳಿದುಬಂದಿಲ್ಲ. ಆದರೆ ಕುಟುಂಬಸ್ಥರ ಒತ್ತಾಯದ ಮೇರೆಗೆ ಮದುವೆಗೆ ಯುವತಿ ಸಮ್ಮತಿಸಿದ್ದು, ಆಕೆ ತಾಳಿಕಟ್ಟುವ ವೇಳೆ ಧೈರ್ಯ ಮಾಡಿ ವಿವಾಹ ನಿರಾಕರಿಸಿದ್ದಾಳೆಂಬ ಮಾತುಗಳು ಕೇಳಿಬಂದಿವೆ. ಸದ್ಯ ಪ್ರಕರಣ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Bride rejects bridegroom on the day of wedding on stage at Chitradurga, video goes viral.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm