ಬ್ರೇಕಿಂಗ್ ನ್ಯೂಸ್
11-12-23 05:11 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.11: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಲೋಕಸಭೆ ಟಿಕೆಟ್ ಆಫರ್ ನೀಡಿದರೆ, ಅದನ್ನು ನಟ ಶಿವರಾಜ್ ಕುಮಾರ್ ನಯವಾಗಿಯೇ ತಿರಸ್ಕರಿಸಿದ್ದು ತಾನು ರಾಜಕೀಯಕ್ಕೆ ಬರಲ್ಲ, ಬಣ್ಣ ಹಚ್ಚೋದರಲ್ಲಿಯೇ ಮುಂದುವರಿಯುತ್ತೇನೆ ಎಂದಿದ್ದಾರೆ.
ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಈಡಿಗರ ಜಾಗೃತ ಸಮಾವೇಶದಲ್ಲಿ ಮಾತನಾಡುತ್ತ ಡಿಸಿಎಂ ಡಿಕೆಶಿ ಅವರು, ಜೊತೆಯಲ್ಲಿದ್ದ ಶಿವರಾಜ್ ಕುಮಾರ್ ಗೆ ಲೋಕಸಭೆ ಟಿಕೆಟ್ ಆಫರ್ ನೀಡಿದ್ದಾರೆ. ಆದರೆ ನಟ ಶಿವಣ್ಣ ಅದನ್ನು ಅದೇ ವೇದಿಕೆಯಲ್ಲಿ ನಿರಾಕರಿಸಿ ಗಮನ ಸೆಳೆದರು.
ಡಿ.ಕೆ. ಶಿವಕುಮಾರ್ ಈಡಿಗ ಸಮಾವೇಶದಲ್ಲಿ ಮಾತನಾಡಿ, ನೀನು ಪಾರ್ಲಿಮೆಂಟ್ ವೋಟಿಗೆ ನಿಂತುಕೊಳ್ಳಲು ರೆಡಿಯಾಗಿ. ನಿನಗೆ ಎಲ್ಲಿ ಬೇಕೋ ಅಲ್ಲಿ ಸೀಟು ಕೊಡುತ್ತೇನೆ ಎಂದು ಹೇಳಿದ್ದು ಸಂಚಲನ ಮೂಡಿಸಿದೆ. ಆದರೆ, ಆನಂತರ ಈ ಬಗ್ಗೆ ಮಾತನಾಡಿದ ಶಿವಣ್ಣ, ಈಗಾಗಲೇ ಐದಾರು ಸಿನಿಮಾ ಒಪ್ಪಿಕೊಂಡು ಬಿಟ್ಟಿದ್ದೇನೆ, ನನಗೆ ರಾಜಕೀಯ ಮಾಡಲು ಟೈಮಿಲ್ಲ. ನನಗೆ ಅದು ಹಿಡಿಸದಯ ಎಂದು ಹೇಳಿದ್ದಾರೆ.
ಸಿನಿಮಾ ಯಾವಾಗ ಬೇಕಾದರೂ ಮಾಡಬಹುದು, ಪಾರ್ಲಿಮೆಂಟ್ಗೆ ಹೋಗುವ ಯೋಗ ಸುಲಭವಾಗಿ ಬರುವುದಿಲ್ಲ. ಆ ಯೋಗ ಮನೆ ಬಾಗಿಲಿಗೆ ಬಂದಿದೆ. ಅವಕಾಶ ತಪ್ಪಿಸಿಕೊಳ್ಳಲು ಹೋಗಬೇಡ ಎಂದು ಡಿ.ಕೆ.ಶಿವಕುಮಾರ್ ಸಮಾವೇಶದಲ್ಲಿ ಬಹಿರಂಗವಾಗಿ ಶಿವರಾಜ್ ಕುಮಾರ್ಗೆ ಎಂಪಿ ಟಿಕೆಟ್ ಆಫರ್ ಕೊಟ್ಟರು.
ಇದಕ್ಕೆ ಪ್ರತಿಕ್ರಿಯಿಸಿದ ಶಿವರಾಜ್ ಕುಮಾರ್, ನಮ್ಮ ತಂದೆ ಕೊಟ್ಟಿರುವ ಬಳುವಳಿ ಬಣ್ಣ ಹಚ್ಚೋದನ್ನು ಮುಂದುವರಿಸಿ ಹೋಗುತ್ತೇನೆ. ನಮ್ಮದೇನಿದ್ದರೂ ಮೇಕಪ್ ಹಾಕೋದು, ಸಿನಿಮಾ ಮಾಡೋದು. ರಾಜಕೀಯ ನಮಗೆ ಬೇಡ, ಅದನ್ನು ಮಾಡೋಕೆ ಬೇರೆಯವರು ಇದ್ದಾರೆ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.
Kannada film actor Shiva Rajkumar has declined Karnataka Deputy Chief Minister DK Shivakumar's offer to contest in the upcoming Lok Sabha elections. During the Ediga community convention in Bengaluru, Congress leader DK Shivakumar had offered Shiva Rajkumar a Lok Sabha ticket from the party, stating that such an opportunity to enter Parliament does not come to everyone.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am