ಬ್ರೇಕಿಂಗ್ ನ್ಯೂಸ್
14-12-23 07:45 pm HK News Desk ಕರ್ನಾಟಕ
ಬೆಳಗಾವಿ, ಡಿ 14: ಮದ್ಯಪಾನ ಪ್ರಿಯರಿಗೆ ಸರ್ಕಾರ ವಿಶೇಷ ಸವಲತ್ತುಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ಸದಸ್ಯರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಬೆಳಗಾವಿಯ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. `ನಿತ್ಯ ದುಡಿ, ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ’ ಘೋಷವಾಕ್ಯದೊಂದಿಗೆ ಮದ್ಯಪಾನ ಪ್ರಿಯರು ಪ್ರತಿಭಟನೆ ಮಾಡಿದ್ದಾರೆ. ಸರ್ಕಾರದ ಪರವಾಗಿ ಸಚಿವ ಸಂತೋಷ್ ಲಾಡ್ ಪ್ರತಿಭಟನಾಕಾರರ ಬೇಡಿಕೆಗಳನ್ನ ಆಲಿಸಿ, ಮನವಿ ಸ್ವೀಕರಿಸಿದ್ದಾರೆ. ಈ ವೇಳೆ ಬೇಡಿಕೆಗಳನ್ನ ಕೇಳಿ ಫುಲ್ ಸುಸ್ತಾಗಿದ್ದಾರೆ.

ಮದ್ಯಪಾನ ಪ್ರಿಯರ ಬೇಡಿಕೆಗಳು ಏನೇನು?
ಪ್ರತಿವರ್ಷ ಡಿಸೆಂಬರ್ 31ರ ದಿನವನ್ನು ಮದ್ಯಪಾನ ಪ್ರಿಯರ ದಿನವನ್ನಾಗಿ ಆಚರಣೆ ಮಾಡಬೇಕು. ಅಂದು ಎಲ್ಲಾ ರೀತಿಯ ಬಾರ್ , ರೆಸ್ಟೋರೆಂಟ್ನಲ್ಲಿ 50% ರಿಯಾಯಿತಿ ನೀಡಬೇಕು. ʻಕುಡುಕʼ ಎಂಬ ಪದಬಳಕೆ ನಿಷೇಧ ಮಾಡಬೇಕು, ಮದ್ಯಪಾನ ಪ್ರಿಯರ ಅಭಿವೃದ್ಧಿ ನಿಗಮ ಆರಂಭಿಸಿ 10% ಅನುದಾನ ನೀಡಬೇಕು. ಪ್ರತಿ ಬಾಟಲಿಗೆ ವಿಮೆ ನೀಡಬೇಕು, ಪ್ರತಿ ಬಾರ್ ಮುಂದೆ ಅಂಬುಲೆನ್ಸ್ ಸೇವೆ ನೀಡಬೇಕು. ಬಾರ್ ಪಕ್ಕದಲ್ಲಿ ಕುಡುಕರ ವಿಶ್ರಾಂತಿಗಾಗಿ ಭವನ ನಿರ್ಮಾಣ ಮಾಡಬೇಕು ಎಂದು ಸಂಘದ ಪ್ರಮುಖರು ಒತ್ತಾಯಿಸಿದ್ದಾರೆ.
ಮದ್ಯಪಾನ ಪ್ರಿಯರ ಆರೋಗ್ಯ ಹಾಳಾಗುತ್ತಿದೆ. ಲಿವರ್ ಸಮಸ್ಯೆಗೆ ತುತ್ತಾಗಿ ಆಸ್ಪತ್ರೆಗೆ ಬಿಲ್ ಪಾವತಿಸಲಾಗದೇ ಮರಣ ಹೊಂದುವ ಪರಿಸ್ಥಿತಿ ಬರುತ್ತಿದೆ. ಆದ್ದರಿಂದ ಆರೋಗ್ಯ ಸಮಸ್ಯೆಗಳಿಂದ ಆಗುವ ಖರ್ಚನ್ನು ಸರ್ಕಾರವೇ ಭರಿಸಬೇಕು. ಮದ್ಯಪಾನ ಪ್ರಿಯರಿಂದ ವಾರ್ಷಿಕವಾಗಿ 36,000 ಕೋಟಿ ರೂ. ಆದಾಯ ಸರ್ಕಾರಕ್ಕೆ ಬರುತ್ತಿದೆ. ಕುಡುಕರಿಗೆ ಪ್ರತ್ಯೇಕ ನಿಧಿ ಸ್ಥಾಪಿಸಿ ಆದಾಯದ 10% ಹಣವನ್ನ ನಿಧಿಗೆ ಮೀಸಲಿಡಬೇಕು. ಮದ್ಯಪಾನ ಪ್ರಿಯರು ಮೃತಪಟ್ಟ ಸಂದರ್ಭದಲ್ಲಿ 10 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
Drunkards protest for insurance and ambulance at every bar to minister Santosh Lad in Belagavi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am