ಬ್ರೇಕಿಂಗ್ ನ್ಯೂಸ್
15-12-23 03:18 pm HK News Desk ಕರ್ನಾಟಕ
ಮೈಸೂರು, ಡಿ 15: ಸಂಸತ್ತಿನಲ್ಲಿ ಸ್ಮೋಕ್ ಬಾಂಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಳಿಕೊರರಿಗೆ ಪಾಸ್ ನೀಡಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ವಿವಾದಿತ ಫ್ಲೆಕ್ಸ್ ಅಳವಡಿಸಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನ ಮಹಾರಾಜ ವೃತ್ತದ ಬಳಿ ಫ್ಲೆಕ್ಸ್ ಅಳವಡಿಸಿದ್ದು, ಪ್ರತಾಪ್ ಸಿಂಹ ದೇಶದ್ರೋಹಿ ಎಂದು ಬರೆಯಲಾಗಿದೆ. ಫ್ಲೆಕ್ಸ್ನಲ್ಲಿ ಬಾಂಬ್ ಹಾಗೂ ಪಾಸ್ ಹಿಡಿದು ನಿಂತಿರುವ ರೀತಿಯ ತಿರುಚಿದ ಫೋಟೋವನ್ನು ಅಳವಡಿಸಲಾಗಿದೆ.

ಸಂಸದ ಸ್ಥಾನದಿಂದ ಪ್ರತಾಪ್ ಸಿಂಹ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಚಳುವಳಿ ನಡೆಸಲಾಗುತ್ತಿದೆ. ಸಂಸತ್ ಭವನಕ್ಕೆ ದುಷ್ಕರ್ಮಿಗಳಿಗೆ ನುಗ್ಗಲು ಪಾಸ್ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಪ್ರತಿಭಟಸಿದೆ.
ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಸಿಬ್ಬಂದಿ ಪ್ರತಾಪ್ ಸಿಂಹ ವಿವಾದಿತ ಫ್ಲೆಕ್ಸ್ ಅನ್ನು ತೆರವುಗೊಳಿಸಲು ಮುಂದಾಗಿದೆ. ಈ ವೇಳೆ ಹಿಂದುಳಿದ ಜಾಗೃತ ವೇದಿಕೆ ಸದಸ್ಯರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ.
ಫ್ಲೆಕ್ಸ್ ನಲ್ಲಿ ಸಂಸದರನ್ನು ಒಬ್ಬ ಭಯೋತ್ಪಾದಕನಂತೆ ತೋರಿಸಿ ತಾಲಿಬಾನ್ ಉಗ್ರರು ತಲೆಗೆ ಸುತ್ತುವ ಶಮ್ಲಾವನ್ನು ಪ್ರತಾಪ್ ತಲೆಗೆ ಸುತ್ತಿ ಕೈಗಳಲ್ಲಿ ಬಾಂಬ್ ಗಳನ್ನು ಚಿತ್ರಿಸಲಾಗಿದೆ. ಅವರನ್ನು ಸಂಸತ್ ಸ್ಥಾನದಿಂದ ವಜಾಗೊಳಿಸುವಂತೆ ಜಾಗೃತ ವೇದಿಕೆ ಸಹಿ ಅಭಿಯಾನ ಶುರುಮಾಡಿರುವುದನ್ನು ಫ್ಲೆಕ್ಸ್ ನಲ್ಲಿ ಬರೆಯಲಾಗಿದೆ. ಪೊಲೀಸರು ಫ್ಲೆಕ್ಸ್ ಅನ್ನು ಮಹಾರಾಜ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಿದ ಬಳಿಕ ಪಾಲಿಕೆ ಸಿಬ್ಬಂದಿ ಅದನ್ನು ಅಲ್ಲಿಂದ ತೆಗೆದುಕೊಂಡು ಹೋಗಿದೆ.
A controversial flex has been erected in Mysuru against MP Pratap Simha for issuing passes to the attackers in connection with the smoke bomb case in Parliament.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am