ಬ್ರೇಕಿಂಗ್ ನ್ಯೂಸ್
18-12-23 07:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.18: ಆರು ಮಂದಿ ಮಹಿಳೆಯರು ರಾಮನಗರ ಬಳಿಯ ಹಂಡಿ ಗುಂಡಿ ಬೆಟ್ಟಕ್ಕೆ ಟ್ರಕ್ಕಿಂಗ್ ಹೋಗಿ ಮರಳಿ ಬರಲು ದಾರಿ ಕಾಣದೆ ಸಿಕ್ಕಿಬಿದ್ದು ಕೊನೆಗೆ ಪೊಲೀಸರು ರಕ್ಷಿಸಿದ ಘಟನೆ ನಡೆದಿದೆ.
ಮಹಿಳೆಯರು ರಾಮನಗರ ಜಿಲ್ಲೆಯ ಬಸವನಪುರ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕಾರು ನಿಲ್ಲಿಸಿ ಅಲ್ಲಿಂದ ಹಂಡಿ ಗುಂಡಿ ಬೆಟ್ಟದ ಕಾಡಿನಲ್ಲಿ ಟ್ರಕ್ಕಿಂಗ್ ತೆರಳಿದ್ದರು. ಸಂಜೆ ವೇಳೆಗೆ ಬೆಟ್ಟದಿಂದ ಇಳಿದು ಬರುತ್ತಿದ್ದಾಗ ರಸ್ತೆ ಸಿಗಲಿಲ್ಲ. ರಾತ್ರಿಯಾದರೂ ಅತ್ತಿತ್ತ ಹುಡುಕಾಡಿ ರಸ್ತೆ ಸಿಗದೇ ಇದ್ದುದರಿಂದ 7.15ರ ಸುಮಾರಿಗೆ 112 ನಂಬರಿಗೆ ಫೋನ್ ಮಾಡಿದ್ದರು.
ಕೂಡಲೇ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಗಸ್ತಿನಲ್ಲಿದ್ದ ರಾಜೇಶ್ ಮತ್ತು ರಮೇಶ್ ಆ ಭಾಗದಲ್ಲೇ ಇದ್ದುದರಿಂದ ಅವರಿಗೆ ಸಂದೇಶ ಹೋಗುತ್ತದೆ. 7.30ರ ಸುಮಾರಿಗೆ ಮಹಿಳೆಯರನ್ನು ಫೋನಲ್ಲಿ ಸಂಪರ್ಕಿಸಿದ ಪೊಲೀಸರು, ನೀವು ಯಾವುದೇ ಆತಂಕ ಪಡುವುದು ಬೇಡ. ನಾವು ಹುಡುಕಿ ಬರುತ್ತೇವೆ ಎಂದು ಹೇಳಿದ್ದಾರೆ. ಆದರೆ ಪೊಲೀಸರ ವಾಹನವನ್ನೂ ಬೆಟ್ಟಕ್ಕೆ ಒಯ್ಯಲಾಗದೆ ಅರ್ಧಕ್ಕೆ ನಿಲ್ಲಿಸಿದ್ದಾರೆ.
ರಾತ್ರಿ 8.30ರ ವೇಳೆಗೆ ಸ್ಥಳೀಯ ಸಾರ್ವಜನಿಕರ ಸಹಾಯ ಪಡೆದು ಪೊಲೀಸರು ಟಾರ್ಚ್ ಲೈಟ್ ಹಿಡಿದು ಕಾಡಿನಲ್ಲಿ ಹುಡುಕಾಡಿದ್ದಾರೆ. ಎರಡು ಕಿಮೀ ಉದ್ದಕ್ಕೆ ಕಾಡಿನಲ್ಲಿ ನಡೆದ ಬಳಿಕ ಮಹಿಳೆಯರು ಸಿಕ್ಕಿದ್ದು, ಮರಳಿ ರಸ್ತೆಗೆ ತಲುಪಿಸಿದ್ದಾರೆ. ಹಂಡಿ ಗುಂಡಿ ಬೆಟ್ಟದಲ್ಲಿ ಕರಡಿ, ಚಿರತೆಗಳಿದ್ದು, ಅದೃಷ್ಟವಶಾತ್ ಮಹಿಳೆಯರಿಗೆ ತೊಂದರೆ ಮಾಡಿಲ್ಲ. 112 ಗೆ ಕರೆ ಮಾಡಲು ಫೋನ್ ನೆಟ್ವರ್ಕ್ ಸಿಕ್ಕಿದ್ದರಿಂದ ಬಚಾವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯರು ಬನ್ನೇರುಘಟ್ಟ ಆಸುಪಾಸಿನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವವರಾಗಿದ್ದಾರೆ.
Six city women lost their way during a trekking expedition to a hill in Ramanagara district Saturday and were rescued by 112 staff.The women dialled 112 to reach the Emergency Response Support System (ERSS) after losing their way. BR Ravikanthe Gowda, IGP (Central range) confirmed the rescue.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm