ಬ್ರೇಕಿಂಗ್ ನ್ಯೂಸ್
20-12-23 06:05 pm HK News Desk ಕರ್ನಾಟಕ
ಮೈಸೂರು, ಡಿ 20: ರಸ್ತೆ ಅಪಘಾತದಲ್ಲಿ ಇಬ್ಬರು ಗೆಳೆಯರು ಮೃತಪಟ್ಟ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲೂಪುರ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.
ನಂಜನಗೂಡಿನ ತಗಡೂರು ಗ್ರಾಮದ ಶಿವಮಲ್ಲೆಗೌಡ ಎಂಬವರ ಮಗ ಮಹೇಶ್ (24) ಮತ್ತು ಅದೇ ಗ್ರಾಮದ ನಾಗರಾಜು ಎಂಬವರ ಪುತ್ರ ಮಹೇಶ್ (23) ಮೃತರೆಂದು ತಿಳಿದುಬಂದಿದೆ.
ಯುವಕರಿಬ್ಬರೂ ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ದಿನಗೂಲಿ ಕಾರ್ಮಿಕರಾಗಿದ್ದರು. ಬೆಳಿಗ್ಗೆ ಕಾರ್ಖಾನೆ ಕೆಲಸಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೋರ್ವ ಮಹೇಶ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟ್ಯಾಂಕರ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ವರುಣಾ ಕ್ಷೇತ್ರದ ಮಾಜಿ ಶಾಸಕ, ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಿಳಿಗೆರೆ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಟ್ಯಾಂಕರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಮಿಕರ ಮೃತದೇಹಗಳನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
Two friends were killed in a road accident near Mallupura village in Nanjangud taluk of the district on Wednesday morning. The deceased have been identified as Mahesh (24), son of Shivamallegowda of Tagadur village in Nanjangud and Mahesh (23), son of Nagaraju of the same village.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am