ಬ್ರೇಕಿಂಗ್ ನ್ಯೂಸ್
20-12-23 07:39 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.20: ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚತ್ತುಕೊಂಡಿದ್ದು, ವಿಧಾನಸೌಧದ ಭದ್ರತೆಯ ಹೊಣೆಯನ್ನು ರಾಜ್ಯ ಪೊಲೀಸರಿಗೆ ನೀಡಲು ಮುಂದಾಗಿದೆ.
ವಿಧಾನಸೌಧ ಒಳಗಿನ ಭದ್ರತೆಯ ಜವಾಬ್ದಾರಿಯನ್ನು ಹಲವಾರು ಇಲಾಖೆಗಳು ಹೊತ್ತುಕೊಂಡಿವೆ. ಆದರೆ, ಒಂದು ವೇಳೆ ಭದ್ರತಾ ವೈಫಲ್ಯ ಎದುರಾದರೆ ಅದರ ಹೊಣೆಗಾರಿಕೆಯನ್ನು ನಿರ್ದಿಷ್ಟ ಇಲಾಖೆಯ ಮೇಲೆ ಹೊರಿಸಲು ಸಾಧ್ಯವಾಗಲ್ಲ. ಹೀಗಾಗಿ ಅಧಿವೇಶನ ಸಂದರ್ಭದಲ್ಲಿ ಭದ್ರತೆ ಹೆಚ್ಚಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಈಗಾಗಲೇ ಶಾಸಕರು ಮತ್ತು ವಿಧಾನಸೌಧಕ್ಕೆ ಭೇಟಿ ನೀಡುವವರ ಸುರಕ್ಷತೆಯ ಜವಾಬ್ದಾರಿ ಪೊಲೀಸರ ಮೇಲೆ ಇದೆ. ಹೀಗಾಗಿ ವಿಧಾನಸೌಧ ಕಟ್ಟಡದ ಒಳ ಹೊರಗಿನ ಭದ್ರತೆಯ ಹೊಣೆಯನ್ನೂ ಪೊಲೀಸರಿಗೇ ನೀಡುವ ಕುರಿತು ಚಿಂತನೆಗಳು ನಡೆಯುತ್ತಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ವಿಧಾನಸೌಧ ಹಾಗೂ ಸುತ್ತಮುತ್ತ ಹೈಟೆಕ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆ ಇದೆ. ಕ್ಯಾಮೆರಾಗಳನ್ನು ಅಳವಡಿಸಲು 10-12 ಏಜೆನ್ಸಿಗಳು ಮುಂದೆ ಬಂದಿವೆ. ವಿಧಾನಸೌಧ ಜವಾಬ್ದಾರಿಯನ್ನು ಪೊಲೀಸ್ ಇಲಾಖೆಗೆ ನೀಡಿದಲ್ಲಿ ಪೊಲೀಸರು ಹೈಟೆಕ್ ಸೆಕ್ಯುರಿಟಿ ಗ್ಯಾಜೆಟ್ಗಳ ಮೇಲೆ ನಿಗಾ ಇಡುತ್ತಾರೆಂದು ತಿಳಿಸಿದ್ದಾರೆ.
ಇದಲ್ಲದೆ, ಸಂದರ್ಶಕರಿಗೆ ನೀಡುವ ಪಾಸ್ಗಳಿಗೆ ಅಂತಿಮ ಅನುಮೋದನೆ ನೀಡುವ ಅಧಿಕಾರವನ್ನು ಪೊಲೀಸ್ ಇಲಾಖೆಗೆ ನೀಡಲಾಗುವುದು. ಇದು ಸುರಕ್ಷತೆಯ ವಿಷಯವಾಗಿದ್ದು, ಪೊಲೀಸರಿಗೆ ಇದರ ಜವಾಬ್ದಾರಿಯನ್ನು ನೀಡಲಾಗುವುದು ಎಂದರು.
The incident of miscreants attacking the Parliament House in Bengaluru has shocked the entire nation. Following the incident, the state government has woken up and has decided to hand over the responsibility of security of vidhana soudha to the police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am