ಬ್ರೇಕಿಂಗ್ ನ್ಯೂಸ್
18-11-20 05:13 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 18: ಚುನಾವಣಾ ತಕರಾರು ಅರ್ಜಿ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ನ್ಯಾಯಾಧೀಶರು 5 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ.
ಖಂಡ್ರೆ ವಿರುದ್ಧ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಕೆ.ಸಿದ್ರಾಮ ಎಂಬವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆಸಿದ್ದಾರೆ, ಅಲ್ಲದೆ, ಚುನಾವಣಾ ಆಯೋಗಕ್ಕೆ ಆಸ್ತಿ ಘೋಷಣೆ ಮಾಡಿಕೊಂಡಿಲ್ಲ ಎಂದು ದೂರು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಖಂಡ್ರೆ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದ್ದರು.

ಕಳೆದ ಬಾರಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈಶ್ವರ್ ಖಂಡ್ರೆಗೆ ನೋಟೀಸ್ ಜಾರಿ ಮಾಡಿತ್ತು. ಆಬಳಿಕ ಹಲವು ಬಾರಿ ಅರ್ಜಿ ವಿಚಾರಣೆಗೆ ಬಂದರೂ, ಖಂಡ್ರೆ ಕೋರ್ಟಿಗೆ ಹಾಜರಾಗಿರಲಿಲ್ಲ. ಇದರಿಂದ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಇದಕ್ಕೆ ಖಂಡ್ರೆ ಪರ ವಕೀಲರು, ತನ್ನ ಪಿಎಗೆ ಮರೆವು ರೋಗ ಇದೆ, ಹಾಗಾಗಿ ಕೇಸ್ ಬಗ್ಗೆ ಗಮನಕ್ಕೆ ಬಂದಿರಲಿಲ್ಲ ಖಂಡ್ರೆ ಪರವಾಗಿ ಪ್ರಮಾಣ ಪತ್ರ ಹಾಜರುಪಡಿಸಿದ್ದರು.
ಇಂದು ಮತ್ತೆ ಅದೇ ಪ್ರಕರಣ ವಿಚಾರಣೆಗೆ ಬಂದಿದ್ದು, ನ್ಯಾಯಾಧೀಶರು ಗರಂ ಆಗಿದ್ದಾರೆ. ಅಲ್ಲದೆ, ಕೋರ್ಟಿಗೆ ಹಾಜರಾಗದೆ ಅಗೌರವ ತೋರಿದ ಶಾಸಕ ಈಶ್ವರ ಖಂಡ್ರೆಗೆ 5 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ಸಿಎಂ ಕೊರೊನಾ ಪರಿಹಾರ ನಿಧಿಗೆ ಪಾವತಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
High Court has fined Rs 5 lakhs to Kpcc Working President Eshwar Khandre for not attending the court on the dates of case.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm