ಬ್ರೇಕಿಂಗ್ ನ್ಯೂಸ್
            
                        18-11-20 05:13 pm Bangalore Correspondent ಕರ್ನಾಟಕ
            ಬೆಂಗಳೂರು, ನವೆಂಬರ್ 18: ಚುನಾವಣಾ ತಕರಾರು ಅರ್ಜಿ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ನ್ಯಾಯಾಧೀಶರು 5 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ.
ಖಂಡ್ರೆ ವಿರುದ್ಧ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಕೆ.ಸಿದ್ರಾಮ ಎಂಬವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆಸಿದ್ದಾರೆ, ಅಲ್ಲದೆ, ಚುನಾವಣಾ ಆಯೋಗಕ್ಕೆ ಆಸ್ತಿ ಘೋಷಣೆ ಮಾಡಿಕೊಂಡಿಲ್ಲ ಎಂದು ದೂರು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಖಂಡ್ರೆ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದ್ದರು.

ಕಳೆದ ಬಾರಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈಶ್ವರ್ ಖಂಡ್ರೆಗೆ ನೋಟೀಸ್ ಜಾರಿ ಮಾಡಿತ್ತು. ಆಬಳಿಕ ಹಲವು ಬಾರಿ ಅರ್ಜಿ ವಿಚಾರಣೆಗೆ ಬಂದರೂ, ಖಂಡ್ರೆ ಕೋರ್ಟಿಗೆ ಹಾಜರಾಗಿರಲಿಲ್ಲ. ಇದರಿಂದ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಇದಕ್ಕೆ ಖಂಡ್ರೆ ಪರ ವಕೀಲರು, ತನ್ನ ಪಿಎಗೆ ಮರೆವು ರೋಗ ಇದೆ, ಹಾಗಾಗಿ ಕೇಸ್ ಬಗ್ಗೆ ಗಮನಕ್ಕೆ ಬಂದಿರಲಿಲ್ಲ ಖಂಡ್ರೆ ಪರವಾಗಿ ಪ್ರಮಾಣ ಪತ್ರ ಹಾಜರುಪಡಿಸಿದ್ದರು.
ಇಂದು ಮತ್ತೆ ಅದೇ ಪ್ರಕರಣ ವಿಚಾರಣೆಗೆ ಬಂದಿದ್ದು, ನ್ಯಾಯಾಧೀಶರು ಗರಂ ಆಗಿದ್ದಾರೆ. ಅಲ್ಲದೆ, ಕೋರ್ಟಿಗೆ ಹಾಜರಾಗದೆ ಅಗೌರವ ತೋರಿದ ಶಾಸಕ ಈಶ್ವರ ಖಂಡ್ರೆಗೆ 5 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ಸಿಎಂ ಕೊರೊನಾ ಪರಿಹಾರ ನಿಧಿಗೆ ಪಾವತಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
            
            
            High Court has fined Rs 5 lakhs to Kpcc Working President Eshwar Khandre for not attending the court on the dates of case.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm