ಬ್ರೇಕಿಂಗ್ ನ್ಯೂಸ್
25-12-23 06:02 pm HK News Desk ಕರ್ನಾಟಕ
ಹೊಸಕೋಟೆ, ಡಿ 25: ಹನುಮ ಜಯಂತಿ ಹಿನ್ನೆಲೆಯಲ್ಲಿ ಭಾನುವಾರ ನಗರದ ಹಲವು ದೇವಸ್ಥಾನಗಳಲ್ಲಿ ಪ್ರಸಾದ ಸೇವಿಸಿದ್ದ 200ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.
ಹನುಮ ಜಯಂತಿ ಪ್ರಯುಕ್ತ ದೇಗುಲಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದೇವರ ದರ್ಶನ ಪಡೆಯಲು ಹೋಗಿದ್ದ ಭಕ್ತರು ಅಲ್ಲಿ ವಿತರಿಸಲಾಗುತ್ತಿದ್ದ ಪ್ರಸಾದ ಸೇವಿಸಿದ್ದರು. ಸಂಜೆಯ ನಂತರ ಹಲವರು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಹೊಸಕೋಟೆಯ ಖಾಸಗಿ ಆಸ್ಪತ್ರೆಗಳು ಹಾಗು ಕೋಲಾರ, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಜನರು ದಾಖಲಾಗಿದ್ದಾರೆ. ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಗಂಗಮ್ಮ (60) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಮಹಿಳೆ ಹೊಸಕೋಟೆಯ ಕಾವೇರಿ ನಗರದ ನಿವಾಸಿಯಾಗಿದ್ದಾರೆ. ಇವರ ಪತಿ ಶಿವಣ್ಣ ಲಡ್ಡು ಪ್ರಸಾದ ತಂದುಕೊಟ್ಟಿದ್ದರು. ಇದನ್ನು ಸೇವಿಸಿದ ಬಳಿಕ ಬೆಳಿಗ್ಗೆ ಅಸ್ವಸ್ಥರಾಗಿದ್ದಾರೆ. ನಂತರ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಗರದಲ್ಲಿ ಕಳೆದು ಎರಡು ದಿನಗಳಿಂದ ನಡೆದ ವೈಕುಂಠ ಏಕಾದಶಿ ಮತ್ತು ನಿನ್ನೆಯ ಹನುಮ ಜಯಂತಿ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿ ಪ್ರಸಾದ ಸೇವಿಸಿರುವ ಪರಿಣಾಮ ಜನರು ವಾಂತಿ, ಭೇದಿ, ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ 8 ಜನರ ಸ್ಥಿತಿ ಚಿಂತಾಜನಕವಾಗಿದೆ. ಹಲವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಫುಡ್ ಪಾಯಿಸನ್ ನಿಂದ ಅಸ್ವಸ್ಥಗೊಂಡಿರುವುದು ದೃಢಪಟ್ಟಿದ್ದು, ಗುಣಮಟ್ಟದವಿಲ್ಲದ ಆಹಾರ, ಅಡುಗೆ ಮಾಡಲು ಬಳಸಿದ ಪಾತ್ರೆಗಳು, ಬರೀ ಕೈಯಲ್ಲಿ ಆಹಾರ ನೀಡಿರುವುದು ಮತ್ತು ಹಳಸಿದ ಆಹಾರ ಸೇವನೆ ಅಸ್ವಸ್ಥರಾಗಲು ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
More than 200 devotees, who consumed prasadam at various temples in the city on Sunday on the occasion of Hanuman Jayanti, fell ill and are undergoing treatment at various hospitals. One woman died after failing to respond to treatment.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am