ಬ್ರೇಕಿಂಗ್ ನ್ಯೂಸ್
25-12-23 06:02 pm HK News Desk ಕರ್ನಾಟಕ
ಹೊಸಕೋಟೆ, ಡಿ 25: ಹನುಮ ಜಯಂತಿ ಹಿನ್ನೆಲೆಯಲ್ಲಿ ಭಾನುವಾರ ನಗರದ ಹಲವು ದೇವಸ್ಥಾನಗಳಲ್ಲಿ ಪ್ರಸಾದ ಸೇವಿಸಿದ್ದ 200ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.
ಹನುಮ ಜಯಂತಿ ಪ್ರಯುಕ್ತ ದೇಗುಲಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದೇವರ ದರ್ಶನ ಪಡೆಯಲು ಹೋಗಿದ್ದ ಭಕ್ತರು ಅಲ್ಲಿ ವಿತರಿಸಲಾಗುತ್ತಿದ್ದ ಪ್ರಸಾದ ಸೇವಿಸಿದ್ದರು. ಸಂಜೆಯ ನಂತರ ಹಲವರು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಹೊಸಕೋಟೆಯ ಖಾಸಗಿ ಆಸ್ಪತ್ರೆಗಳು ಹಾಗು ಕೋಲಾರ, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಜನರು ದಾಖಲಾಗಿದ್ದಾರೆ. ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಗಂಗಮ್ಮ (60) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಮಹಿಳೆ ಹೊಸಕೋಟೆಯ ಕಾವೇರಿ ನಗರದ ನಿವಾಸಿಯಾಗಿದ್ದಾರೆ. ಇವರ ಪತಿ ಶಿವಣ್ಣ ಲಡ್ಡು ಪ್ರಸಾದ ತಂದುಕೊಟ್ಟಿದ್ದರು. ಇದನ್ನು ಸೇವಿಸಿದ ಬಳಿಕ ಬೆಳಿಗ್ಗೆ ಅಸ್ವಸ್ಥರಾಗಿದ್ದಾರೆ. ನಂತರ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಗರದಲ್ಲಿ ಕಳೆದು ಎರಡು ದಿನಗಳಿಂದ ನಡೆದ ವೈಕುಂಠ ಏಕಾದಶಿ ಮತ್ತು ನಿನ್ನೆಯ ಹನುಮ ಜಯಂತಿ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿ ಪ್ರಸಾದ ಸೇವಿಸಿರುವ ಪರಿಣಾಮ ಜನರು ವಾಂತಿ, ಭೇದಿ, ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ 8 ಜನರ ಸ್ಥಿತಿ ಚಿಂತಾಜನಕವಾಗಿದೆ. ಹಲವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಫುಡ್ ಪಾಯಿಸನ್ ನಿಂದ ಅಸ್ವಸ್ಥಗೊಂಡಿರುವುದು ದೃಢಪಟ್ಟಿದ್ದು, ಗುಣಮಟ್ಟದವಿಲ್ಲದ ಆಹಾರ, ಅಡುಗೆ ಮಾಡಲು ಬಳಸಿದ ಪಾತ್ರೆಗಳು, ಬರೀ ಕೈಯಲ್ಲಿ ಆಹಾರ ನೀಡಿರುವುದು ಮತ್ತು ಹಳಸಿದ ಆಹಾರ ಸೇವನೆ ಅಸ್ವಸ್ಥರಾಗಲು ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
More than 200 devotees, who consumed prasadam at various temples in the city on Sunday on the occasion of Hanuman Jayanti, fell ill and are undergoing treatment at various hospitals. One woman died after failing to respond to treatment.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm