ಬ್ರೇಕಿಂಗ್ ನ್ಯೂಸ್
25-12-23 10:03 pm HK News Desk ಕರ್ನಾಟಕ
ಶಿರಸಿ, ಡಿ 25: ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಭಾರತ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಸಂಸದ, ಬಿಜೆಪಿ ಮುಖಂಡ ಅನಂತ ಕುಮಾರ್ ಹೆಗಡೆ ಸವಾಲು ಹಾಕಿದ್ದಾರೆ. ಹಲವು ತಿಂಗಳಿನಿಂದ ಕಣ್ಮರೆಯಾಗಿದ್ದ ಅನಂತ್ ಕುಮಾರ್ ಹೆಗಡೆ ಮತ್ತೆ ಸುದ್ದಿಯಲ್ಲಿದ್ದಾರೆ.
ಉತ್ತರ ಕನ್ನಡ ಸಂಸದ ಅನಂತ್ಕುಮಾರ್ ಹೆಗಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಧ್ಯವಾದರೆ ಭಾರತವನ್ನು 'ಹಿಂದೂ ರಾಷ್ಟ್ರ' ಆಗದಂತೆ ತಡೆಯಲಿ ಎಂದು ಸವಾಲು ಹಾಕಿದ್ದು, ಹಿಜಾಬ್ ವಿಚಾರದ ಬಗ್ಗೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು
ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹೆಗ್ಡೆ, ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಸಿದ್ದರಾಮಯ್ಯನವರ ಸರ್ಕಾರ ಮೊಹಮ್ಮದ್ ಬಿನ್ ತುಘಲಕ್ ಸರ್ಕಾರ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿರಸಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಮತವಿಲ್ಲದೆ ಕಾಂಗ್ರೆಸ್ ಉಳಿಯುವುದಿಲ್ಲ. ಕಾಂಗ್ರೆಸ್ ಎಂದಿಗೂ ಬಹುಮತದ ರಾಜಕಾರಣಕ್ಕೆ ಒಲವು ತೋರಿಲ್ಲ. ಅದು ಸದಾ ಹುಚ್ಚಾಟದ ರಾಜಕಾರಣ ಮಾಡುತ್ತಿದೆ ಎಂದರು.
ಟಿಪ್ಪು ಸುಲ್ತಾನ್ ಈ ರಾಜ್ಯವನ್ನು ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಹಾಳು ಮಾಡಿದ್ದು, ಜನ ಆತನನ್ನು ತಿರಸ್ಕರಿಸಿದ್ದಾರೆ. ಟಿಪ್ಪು ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಮಾಡಿದರೆ, ಮುಂದೆ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾಂಗ್ರೆಸ್ ನಾಯಕರು ಯೋಚಿಸಬೇಕು ಎಂದು ಹೇಳಿದರು.
ಯಾರು ಬೇಕಾದರೂ ಯಾವ ಡ್ರೆಸ್ ಹಾಕಿಕೊಳ್ಳಬಹುದು ಎಂಬ ಸಿದ್ದರಾಮಯ್ಯನವರ ಹೇಳಿಕೆ ಭವಿಷ್ಯದಲ್ಲಿ ಅಪಾಯಕಾರಿ ಬೆಳವಣಿಗೆಗಳಿಗೆ ಕಾರಣವಾಗಲಿದೆ. ಅವರಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ, ನಮ್ಮ ಜನರು ಕೇಸರಿ ಶಾಲುಗಳನ್ನು ಧರಿಸುತ್ತಾರೆ. ಸರ್ಕಾರವು ಒಂದು ನಿರ್ದಿಷ್ಟ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು, ಆದರೆ ಸಿಎಂ ಅದನ್ನು ಮೀರುತ್ತಿದ್ದಾರೆ, ಸಿದ್ದರಾಮಯ್ಯನವರಿಗೆ ಛಲವಿದ್ದರೆ ಈ ದೇಶ ಹಿಂದೂ ರಾಷ್ಟ್ರವಾಗುವುದನ್ನು ತಡೆಯಲು ಪ್ರಯತ್ನಿಸಲಿ ಎಂದು ಹೇಳಿದರು.
ಸಿದ್ದರಾಮಯ್ಯನವರ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ. ಕರ್ನಾಟಕದಲ್ಲಿ ಹಿಂದೂ ವಿರೋಧಿ ಸರ್ಕಾರ ಇರಲು ಸಾಧ್ಯವಿಲ್ಲ. ಮುಸಲ್ಮಾನರ ಹಿತಾಸಕ್ತಿ ಮುಂದಿಟ್ಟುಕೊಂಡು ಕಾಂಗ್ರೆಸ್ ಉಳಿಯಬೇಕು ಮತ್ತು ಮತ ಪಡೆಯಬೇಕು ಎಂದಾದರೆ ಇಂತಹ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ, ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Uttara Kannada MP Ananth Kumar Hegde, who had been away from the limelight for several months, on Sunday dared Chief Minister Siddaramaiah to stop India from becoming a ‘Hindu Rashtra’ if he could. “If Chief Minister Siddaramaiah has the courage, let him try to stop India from becoming a Hindu nation”, he thundered.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm