ಬ್ರೇಕಿಂಗ್ ನ್ಯೂಸ್
26-12-23 10:48 pm HK News Desk ಕರ್ನಾಟಕ
ವಿಜಯಪುರ, ಡಿ.26: ಬಿಜೆಪಿ ಸರ್ಕಾರದಲ್ಲಿಯೇ ಭಾರೀ ಕೋವಿಡ್ ಹಗರಣ ಆಗಿದ್ದು ಸುಮಾರು 40 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದು ಬಿಜೆಪಿ ರೆಬಲ್ ಶಾಸಕ ಬಸನಗೌಡ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಡಿಕೆಶಿ ಕೇಸ್ ಬಳಿಕ ಅಪ್ಪಾಜಿಯದ್ದೇ ತನಿಖೆ ಮಾಡಿಸುತ್ತೇನೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ತನಿಖೆ ಮಾಡಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ. 45 ರೂಪಾಯಿ ಮಾಸ್ಕ್ ಗೆ 485 ಬಿಲ್ ಹಾಕಿದ್ದಾರೆ. 10 ಸಾವಿರ ಬೆಡ್ಗಳ ಬಾಡಿಗೆ ಬಿಲ್ ನಲ್ಲಿ ಬೆಡ್ ಖರೀದಿ ಮಾಡಿದ್ರೆ ಎರಡೆರಡು ಬೆಡ್ ಬರ್ತಿದ್ವು.. ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದ್ದಾರೆ.
ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಮರುದಿನವೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಯತ್ನಾಳ್ ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ಬೆದರಿಕೆ ಹಾಕಿದ್ದಾರೆ. ನನಗೆ ಲೂಟಿ ಮಾಡುವ ಚಟ ಇಲ್ಲ. ಯಾವ ಸರ್ಕಾರ ಇದ್ದರೇನು, ಕಳ್ಳರು ಕಳ್ಳರೇ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೂ ಕೋವಿಡ್ ಆಗಿತ್ತು, ಆ ವೇಳೆ ನನಗೂ 5.80 ಲಕ್ಷ ಬಿಲ್ ಮಾಡಿದ್ದಾರೆ. ಶಾಸಕರಿಗೆ ಪಗಾರ ಇದೆ, ಎಲ್ಲಾ ಸರ್ಕಾರದಿಂದ ತೆಗೆದುಕೊಂಡ್ರೇ ಹೇಗೆ.. ಎಂದು ಪ್ರಶ್ನಿಸಿದ ಯತ್ನಾಳ್, ಸತ್ಯ ಹೇಳಿದ್ರೇ ಭಯ ಇರುತ್ತದೆ. ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲು, ನೋಟೀಸ್ ನೀಡಲಿ ಅವರ ಬಗ್ಗೆ ಎಲ್ಲವನ್ನೂ ಹೇಳ್ತೀನಿ ಎಂದು ಬ್ಲಾಕ್ಮೇಲ್ ತಂತ್ರಕ್ಕಿಳಿದಿದ್ದಾರೆ.
Rebel BJP MLA Basanagouda Yatnal has alleged that there is a huge Covid scam in the BJP government and rs 40,000 crore has been misappropriated.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm