ಬ್ರೇಕಿಂಗ್ ನ್ಯೂಸ್
28-12-23 08:38 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.28: ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವಿವಿಧ ಭಂಗಿಗಳಲ್ಲಿ ಅಶ್ಲೀಲವಾಗಿ ಪೋಟೋ ತೆಗೆದುಕೊಂಡು ಶಿಕ್ಷಕರ ನಡುವಳಿಕೆಗಳಿಗೆ ವಿರುದ್ದವಾಗಿ ನಡೆದುಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಪುಪ್ಪಲತಾರನ್ನು ಸೇವೆಯಿಂದ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ
ಶಿಕ್ಷಕಿ ಪುಪ್ಪಲತಾ, ಇತ್ತೀಚೆಗೆ ಶಾಲೆಯಿಂದ ಕೈಗೊಂಡಿದ್ದ ಶೈಕ್ಷಣಿಕ ಪ್ರವಾಸದ ವೇಳೆ ಶಾಲೆಯ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ತೆಂಗಿನ ತೋಟಗಳ ಮಧ್ಯೆ ಪರಸ್ಪರ ಕಿಸ್ ಕೊಡುವ ಪೋಟೋಗಳನ್ನು ತನ್ನ ಮೊಬೈಲ್ ಮೂಲಕ ಸೆರೆ ಹಿಡಿದುಕೊಂಡಿದ್ದರು. ಅವು ಶಿಕ್ಷಕಿಯ ಮೊಬೈಲ್ ನಿಂದ ಸೋರಿಕೆಯಾಗಿ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಶಿಕ್ಷಕಿ ವಿರುದ್ದ ಗಂಭೀರ ಆರೋಪ ಕೇಳಿ ಬಂದ ಬೆನ್ನಲೇ ಶಾಲೆಗೆ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಭೇಟಿ ನೀಡಿ ಪ್ರವಾಸಕ್ಕೆ ತೆರಳಿದ್ದ ಶಾಲಾ ಸಹ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಹಾಗೂ ಅಡುಗೆ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದರು. ಆದರೆ ಅವರು ಯಾರು ಕೂಡ ಮುಖ್ಯ ಶಿಕ್ಷಕಿ ವಿದ್ಯಾರ್ಥಿ ಜೊತೆ ಪೋಟೋಗಳು ತೆಗೆಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಬಿಇಒ ಶಿಪಾರಸ್ಸಿನಂತೆ ಶಾಲಾ ಶಿಕ್ಷಣ ಇಲಾಖೆ ಜಿಲ್ಲೆಯ ಉಪ ನಿರ್ದೇಶಕರಾದ ಪಿ.ಬೈಲಾಂಜನಪ್ಪ, ಇಲಾಖೆ ವಿಚಾರಣೆಗೆ ಕಾಯ್ದರಿಸಿ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.
Chikkaballapur teacher student kissing photos go viral during school picknick, teacher suspended.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm