ಬ್ರೇಕಿಂಗ್ ನ್ಯೂಸ್
19-11-20 11:18 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 19: ಅವಧಿ ಪೂರ್ಣಗೊಂಡರೂ ರಾಜೀನಾಮೆ ನೀಡದ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅವರನ್ನು ಬಿಜೆಪಿ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಸುಜಾತ ಕೃಷ್ಣಪ್ಪ ಅವರನ್ನು ಅಮಾನತು ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ಪಕ್ಷದ ತೀರ್ಮಾನ ಉಲ್ಲಂಘಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪ ಸುಜಾತಾ ಅವರ ಮೇಲಿತ್ತು. ಸುಜಾತಾ ಕೃಷ್ಣಪ್ಪ ಅವರಿಂದ ಪಕ್ಷದ ಘನತೆಗೆ ಧಕ್ಕೆ ಉಂಟಾಗಿದೆ. ಈ ಕುರಿತು ಸಮಜಾಯಿಷಿ ನೀಡಲು ಸೂಚಿಸಿದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
ಪಕ್ಷದ ಆಂತರಿಕ ಒಪ್ಪಂದದಂತೆ ಅಧ್ಯಕ್ಷಗಿರಿಗೆ ಸುಜಾತ ಕೃಷ್ಣಪ್ಪ ರಾಜೀನಾಮೆ ನೀಡಿರಲಿಲ್ಲ. ಹೀಗಾಗಿ ಬುಧವಾರ ಸ್ವಪಕ್ಷಿಯ ಸದಸ್ಯರೇ ಜಿಲ್ಲಾ ಪಂಚಾಯಿತಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಅಧ್ಯಕ್ಷೆ ಸುಜಾತ ಕೃಷ್ಣಪ್ಪ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, ಧಿಕ್ಕಾರ ಕೂಗಿದ್ದರು.


ಪಕ್ಷದ ಆಂತರಿಕ ಒಪ್ಪಂದದಂತೆ ನೀವು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕೆಂದು ಪಟ್ಟು ಹಿಡಿದಿದ್ದರು. ಈ ವೇಳೆ ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ವಾಕ್ಸಮರವೂ ನಡೆಯಿತು. ನಂತರ ಬಿಜೆಪಿ ಸದಸ್ಯರು ಸಭೆ ಬಹಿಷ್ಕರಿಸಿ ಹೊರನಡೆದಿದ್ದರು.
ಈ ಮುನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಖುದ್ದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೂಚನೆ ನೀಡಿದ್ದರೂ ಸುಜಾತ ಕೃಷ್ಣಪ್ಪ ಸೊಪ್ಪು ಹಾಕಿರಲಿಲ್ಲ. ಇದೀಗ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
Chikmagalur Zilla Panchayath President Sujatha Krishna was terminated from its office for continuing to work without giving resignation.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am