ಬ್ರೇಕಿಂಗ್ ನ್ಯೂಸ್
19-11-20 03:44 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 19 : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕಾಫಿ ಡೇ ಸಿದ್ಧಾರ್ಥ ಪುತ್ರ ಅಮಾರ್ಥ್ಯ ಅವರ ವಿವಾಹ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಿದೆ.
ಡಿಕೆ ಶಿವಕುಮಾರ್ ಹಾಗೂ ಎಸ್ ಎಂ ಕೃಷ್ಣ ಕುಟುಂಬಸ್ಥರು ಮತ್ತು ಆಪ್ತರು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಜೂನ್ 12 ರಂದು ಸದಾಶಿವ ನಗರದಲ್ಲಿರುವ ಎಸ್.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಕುಟುಂಬ ಸದಸ್ಯರು ಮದುವೆ ಮಾತುಕತೆ ನಡೆಸಿದ್ದರು. 2021ರ ಫೆಬ್ರವರಿಯಲ್ಲಿ ಇವರ ವಿವಾಹ ನಡೆಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಆರ್ ಅಶೋಕ್ ಸೇರಿದಂತೆ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಉತ್ತರ ಪ್ರದೇಶದ ಖ್ಯಾತ ಜ್ಯೋತಿಷಿ ಪಂಡಿತ್ ಅವರ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ನಿಶ್ಚಿತಾರ್ಥ ನಡೆಯಿತು. ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಗಮಿಸಿ ನವ ಜೋಡಿಗೆ ಹಾರೈಸಿದರು. ಸಭಾಂಗಣವೆಲ್ಲ ಗುಲಾಬಿಮಯವಾಗಿದ್ದು, ಐಶ್ವರ್ಯ ಹಾಗೂ ಅಮರ್ಥ್ಯ ಗುಲಾಬಿ ಬಣ್ಣದ ಉಡುಗೆಯನ್ನು ತೊಟ್ಟು ಕಂಗೊಳಿಸುತ್ತಿದ್ದಾರೆ.
ಹೋಟೆಲ್ನಲ್ಲಿ ಒಟ್ಟು 50 ರೂಂಗಳನ್ನು ಬುಕ್ ಮಾಡಲಾಗಿದ್ದು, ಒಟ್ಟು 250 ಮಂದಿಗೆ ಆಹ್ವಾನ ನೀಡಲಾಗಿದೆ. ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಆಪ್ತ ಶಾಸಕರು, ಕುಟುಂಬಸ್ಥರು, ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಕೊರೊನಾ ಹಿನ್ನೆಲೆ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಆಮಂತ್ರಣ ನೀಡಲಾಗಿಲ್ಲ.
ಅಮರ್ಥ್ಯ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಹಿರಿಯ ಪುತ್ರನಾಗಿದ್ದು ತಂದೆ ಮೃತಪಟ್ಟ ನಂತರ ಅವರ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಐಶ್ವರ್ಯಾ ತನ್ನ ತಂದೆ ನಡೆಸುತ್ತಿರುವ ಗ್ಲೋಬಲ್ ಎಂಜಿನಿಯರಿಂಗ್ ಕಾಲೇಜನ್ನು ನೋಡಿಕೊಳ್ಳುತ್ತಿದ್ದಾರೆ.
Politics were set aside temporarily as photos from the celebrations showed Karnataka Chief Minister Yediyurappa, who sat in the front row, holding DK Shivakumar's hand.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm