ಬ್ರೇಕಿಂಗ್ ನ್ಯೂಸ್
01-01-24 11:09 pm HK News Desk ಕರ್ನಾಟಕ
ಚಿತ್ರದುರ್ಗ, ಜ.1: ಅಯೋಧ್ಯೆಯಲ್ಲಿರುವುದು ಬಿಜೆಪಿಯ ರಾಮ, ನಮ್ಮ ರಾಮ ಸಿದ್ದರಾಮಯ್ಯ ಎಂದು ಕಾಂಗ್ರೆಸ್ ಮಾಜಿ ಸಚಿವ ಹೆಚ್. ಆಂಜನೇಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಮಮಂದಿರ ಉದ್ಘಾಟನೆಗೆ ಕರೆಯದೆ ಇದ್ದಿದ್ದೇ ಒಳ್ಳೆಯದಾಯಿತು. ಸ್ವತಃ ಸಿದ್ದರಾಮಯ್ಯ ಅವರೇ ರಾಮ, ಹೀಗಿರುವಾಗ ಆ ರಾಮನಿಗೇಕೆ ಹೋಗಿ ಅವರು ಪೂಜಿಸಬೇಕು ಎಂದು ಪ್ರಶ್ನಿಸಿದ್ದಾರೆ

ಸಿದ್ದರಾಮಯ್ಯ ಅವರ ತವರು ಸಿದ್ಧರಾಮನಹುಂಡಿಯಲ್ಲೇ ಶ್ರೀರಾಮನ ದೇವಸ್ಥಾನ ಇದೆ, ಅವರು ಅಲ್ಲೇ ಪೂಜಿಸುತ್ತಾರೆ. ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮ ಹೀಗಾಗಿ ಬಿಜೆಪಿಯವರನ್ನ ಕರೆಸಿಕೊಂಡು ಅಲ್ಲಿ ಭಜನೆ ಮಾಡುತ್ತಾರೆ. ಆದ್ರೆ ನಮ್ಮ ರಾಮ ಎಲ್ಲಾ ಕಡೆ ಇದ್ದಾನೆ, ನಮ್ಮ ಎದೆಯಲ್ಲಿಯೂ ಇದ್ದಾನೆ. ನಾನು ಆಂಜನೇಯ, ಗೊತ್ತಲ್ವಾ ಆಂಜನೇಯ ಏನು ಮಾಡಿದ ಅಂತಾ? ಎಂದು ಕುಟುಕಿದ್ದಾರೆ.
ಅಲ್ಲದೇ ನಮ್ಮ ಸಮುದಾಯದವರು ರಾಮ ಹಾಗೂ ಆಂಜನೇಯ, ಹನುಮಂತ ಎಂಬ ಹೆಸರಿಟ್ಟುಕೊಳ್ಳುತ್ತಾರೆ. ರಾಮ, ಆಂಜನೇಯ ನಮ್ಮ ವರ್ಗಕ್ಕೆ ಸೇರಿದವರು. ಆದರೆ ಬಿಜೆಪಿ ಅವರದ್ದು ಧರ್ಮಗಳನ್ನು ಒಡೆದಾಳುವ ನೀತಿಯಾಗಿದೆ. ಒಂದು ಧರ್ಮದ ವಿರುದ್ಧ ಟೀಕಿಸಿ ಮತ ಬ್ಯಾಂಕ್ ಸೃಷ್ಟಿಸುವ ಭ್ರಮೆ ಬಿಜೆಪಿಯವರಿಗಿದೆ. ಅವರ ಆಡಳಿತದಲ್ಲಿ ಯಾರಿಗೆ ಅನುಕೂಲ ಆಗಿದೆ? ಹಿಂದೂ ಯುವಕರಿಗೆ ಬಿಜೆಪಿ ಆಡಳಿತದಿಂದ ಅನುಕೂಲ ಆಗಿದೆಯೆ? ನಾವೂ ಹಿಂದೂಗಳು, ಆದ್ರೆ ಹಿಂದೂಗಳನ್ನು ಮತ್ತು ಹಿಂದೂ ಧರ್ಮವನ್ನ ಬಿಜೆಪಿ ಕೊಂಡುಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯವರು ಮಂದಿ ನಿರ್ಮಾಣ ಮಾಡಿದ್ದು ಸಾಕು, ದೇಶದಲ್ಲಿ ಮನೆ-ಮನಗಳನ್ನು ಕಟ್ಟುವ ಕೆಲಸ ಆಗಬೇಕು. ದೇಶದಲ್ಲಿ ಕೆಲವರು ಈಗಲೂ ಪ್ರಾಣಿಗಳ ರೀತಿ, ಯೋಗ್ಯವಲ್ಲದ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೆ. ಅಂತಹವರಿಗೆ ಸೂರು ಒದಗಿಸಿ ರಕ್ಷಣೆ ಕೊಡಬೇಕು. ದೇಶದಲ್ಲಿ ಮನೆ ಇಲ್ಲದವರಿಗೆ, ಮನೆ ಕಟ್ಟಿಸಿಕೊಟ್ಟು ಅದಕ್ಕೆ ರಾಮಮಂದಿರ ಅಂತ ಹೆಸರಿಟ್ಟರೆ, ಆಗ ನಿಜವಾದ ಶ್ರೀರಾಮ ಬಂದು ಎಲ್ಲರನ್ನು ಆಶೀರ್ವದಿಸುತ್ತಾನೆ. ಹಾಗಾಗಿ ಮತಕ್ಕಾಗಿ ಬಿಜೆಪಿ ರಾಮನನ್ನ ಮಾಡುವುದು ಬೇಡ ಎಂದು ಕಿಡಿ ಕಾರಿದ್ದಾರೆ.
Ayodhya is Rama of BJP, our Rama Siddaramaiah said former Congress minister H. Anjaneya (H Anjaneya) has attacked BJP. Responding to CM Siddaramaiah not being invited to the inauguration of the Ram Mandir, he said that it was good that he was not invited to the inauguration of the Ram Mandir.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am