ಬ್ರೇಕಿಂಗ್ ನ್ಯೂಸ್
02-01-24 03:19 pm HK News Desk ಕರ್ನಾಟಕ
ಹಾಸನ, ಜ.2: ಮನೆಯ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಮನೆಯಲ್ಲಿ ವಿಷಾನಿಲ ತುಂಬಿಸಿ ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ಬೆಳಕಿಗೆ ಬಂದಿದೆ.
ತುಮಕೂರಿನ ಬೇಕರಿಯಲ್ಲಿ ಕೆಲಸ ಮಾಡುವ ಹಾಸನ ತಾಲೂಕು ಸೀಗೆ ಗ್ರಾಮದ ತೀರ್ಥ ಎಂಬವರ ಪತ್ನಿ ಶಿವಮ್ಮ (36), ಮಕ್ಕಳಾದ ಸಿಂಚು (7) ಪವನ (10) ಸಾವಿಗೆ ಶರಣಾದ ದುರ್ದೈವಿಗಳು. ಸೋಮವಾರ ಸಂಜೆ ಪತ್ನಿಗೆ ದೂರವಾಣಿ ಕರೆ ಮಾಡಿದ್ದ ಪತಿ ತೀರ್ಥ ತಾನು ಹಾಸನಕ್ಕೆ ಬರುತ್ತಿದ್ದು ರಾತ್ರಿ ಊಟಕ್ಕೆ ಅಡುಗೆ ಸಿದ್ಧಪಡಿಸಲು ಹೇಳಿದ್ದರು. ಆದರೆ ರಾತ್ರಿ ತಡವಾಗಿ ಬಂದ ಆತ ಬಾಗಿಲು ತಟ್ಟಿದಾಗ ಪತ್ನಿ ಬಾಗಿಲು ತೆರೆಯಲಿಲ್ಲ. ಫೋನ್ ಕರೆಯನ್ನೂ ಸ್ವೀಕರಿಸಲಿಲ್ಲ. ಆಕೆ ನಿದ್ರೆ ಹೋಗಿರಬಹುದು ಎಂದು ಭಾವಿಸಿದ ಪತಿ ಮನೆಯ ಮೇಲ್ಛಾವಣಿಗೆ ಹೋಗಿ ಮಲಗಿದ್ದರು.
ಬೆಳಗ್ಗೆ ಮತ್ತೆ ಬಾಗಿಲು ಬಡಿದರೂ ಬಾಗಿಲು ತೆಗೆಯಲಿಲ್ಲ. ಫೋನ್ ಕರೆ ಮಾಡಿದರೂ ಪ್ರತಿಕ್ರಿಯೆ ಬಾರದ್ದರಿಂದ ಅನುಮಾನಗೊಂಡು ಮನೆ ಮಾಲೀಕರ ನೆರವಿನಲ್ಲಿ ಬಾಗಿಲು ತೆರೆದಿದ್ದಾರೆ. ಮನೆಯ ಒಳಗೆ ಗಾಢವಾದ ಎಲ್ಪಿಜಿ ಗ್ಯಾಸ್ ವಾಸನೆ ತುಂಬಿತ್ತು. ಮನೆಯ ಒಳ ಹೋದಾಗ ನೆಲದ ಮೇಲೆ ಕುಳಿತ ತಾಯಿಯ ಕಾಲುಗಳ ಮೇಲೆ ಇಬ್ಬರು ಮಕ್ಕಳೂ ಮಲಗಿದಲ್ಲೇ ಪ್ರಾಣ ಕಳೆದುಕೊಂಡಿದ್ದರು.
ಹಾಸನದ ಪೆನ್ಷನ್ ಮೊಹಲ್ಲಾ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
In a tragic incident, a mother committed suicide along with her two children by filling poisonous gas inside her house by keeping the windows and doors of her house closed on Tuesday morning. The deceased have been identified as Shivamma (36), wife of Theertha of Seege village in Hassan taluk and her children Sinchu (7) and Pavana (10).
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm