ಬ್ರೇಕಿಂಗ್ ನ್ಯೂಸ್
02-01-24 09:19 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 02: ಶ್ರೀರಾಮ ಧರ್ಮದ ಪರ ಕೆಲಸ ಮಾಡಿದ, ಎಲ್ಲರಿಗೂ ನ್ಯಾಯ ಕೊಟ್ಟ. ಆದರೆ ನಿಮ್ಮ ಸಿದ್ದರಾಮಯ್ಯ ಎಲ್ಲರಿಗೂ ನ್ಯಾಯ ಕೊಟ್ಟರಾ ಎಂದು ಮಾಜಿ ಸಚಿವ ಆಂಜನೇಯ ವಿರುದ್ಧ ಸಿ.ಟಿ.ರವಿ ಕಿಡಿಕಾರಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ನಿಮ್ಮ ಹೆಸರು ಆಂಜನೇಯ; ಸಿದ್ದರಾಮಯ್ಯ ಹೆಸರಿನಲ್ಲಿ ರಾಮ ಇದ್ದಾನೆಂದು ಹೇಳಿದ್ರಿ, ಪರಿಶಿಷ್ಟ ಜಾತಿ, ಪಂಗಡಕ್ಕೆ ಇಟ್ಟ 11ಸಾವಿರ ಕೋಟಿ ವಾಪಸ್ ತಗೆದುಕೊಂಡ್ರಿ, ವೋಟ್ ಬ್ಯಾಂಕ್ ಗಾಗಿ ಅಲ್ಪಸಂಖ್ಯಾತ ರಿಗೆ 10 ಸಾವಿರ ಕೋಟಿ ಇಟ್ಟರು, ಒಬ್ಬರಿಗೆ ಅನ್ಯಾಯ ಮಾಡುವವರೂ ರಾಮನಿಗೆ ಸಮನಾಗಲು ಸಾಧ್ಯವೇ ಎಂದರು.

ಅಯೋಧ್ಯೆ ಹೋರಾಟದಲ್ಲಿ ಪಾಲ್ಗೊಂಡರೆಂದು 31 ವರ್ಷದ ನಂತರ ಆ ಕಾರ್ಯಕರ್ತರ ಮೇಲೆ ಕೇಸ್ ಹಾಕಿದ್ರಿ, ರಾಮನ ಹೆಸರು ಇಟುಕೊಂಡಿದ್ದಕ್ಕೆ ರಾಮನ ಗುಣ ಬಂದಿದೆಯೆಂದು ಭಾವಿಸಲು ಆಗುತ್ತದೆಯೋ, ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ ಆದರೆ ಗುಣ ಇದೆಯೇ ಎಂದು ಪ್ರಶ್ನಿಸಿದರು.
1992ರ ಕರಸೇವೆಯಲ್ಲಿ ನಾನು ಸೇರಿದಂತೆ ಸುನಿಲ್ ಕುಮಾರ್ ಹಾಗೂ ಅನೇಕರು ಭಾಗವಹಿಸಿದ್ದರು. ನಮಗೆ ಇನ್ನೂ ಆಮಂತ್ರಣ ಬಂದಿಲ್ಲ, ಯಾರಿಗೆ ಆಮಂತ್ರಣ ಕೊಡಬೇಕು ಎಂಬ ನಿರ್ಧಾರ ಮಾಡುವ ಅಧಿಕಾರ ರಾಮಮಂದಿರ ನಿರ್ಮಾಣ ಟ್ರಸ್ಟ್ ಗೆ ಮಾತ್ರವಿದೆ. ಆ ಅಧಿಕಾರ ಪ್ರಧಾನಮಂತ್ರಿಗೂ ಇಲ್ಲ. ಅವರು ನಿರ್ಧಾರ ಮಾಡುತ್ತಾರೆ ಎಂದರು.
ಇನ್ನೂ ಕಾಲಾವಕಾಶ ಇದೆ, ಆಮಂತ್ರಣ ಪತ್ರಿಕೆ ಬರಬಹುದು, ಬರದೇ ಇರಬಹುದು, ಮಂದಿರ ನಿರ್ಮಾಣಕ್ಕೆ ಹೋರಾಟ ಮಾಡಿದವರಿಗೆ ಇನ್ನೂ ಆಮಂತ್ರಣ ಬಂದಿಲ್ಲ ಎಂದರು.
ರಾಮಮಂದಿರ ಆಗಬೇಕು ಎಂದು ಕಾಂಗ್ರೆಸ್ ಯಾವತ್ತು ಬಯಸಿತ್ತು? ಕಾಂಗ್ರೆಸ್ ಬಯಸಿದ್ದರೆ ಸ್ವಾತಂತ್ರ ಭಾರತದಲ್ಲಿ ಹೋರಾಟ ಮಾಡುವ ಪ್ರಮೇಯವೇ ಬರುತ್ತಿರಲಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಮಂದಿರ ನಿರ್ಮಾಣ ಆಗುತ್ತಿತ್ತು. ಹೋರಾಟ ಮತ್ತು ಕರಸೇನೆ ಮಾಡುವ ಸಂದರ್ಭ ಬರುತ್ತಿರಲಿಲ್ಲ ಎಂದು ಸಿ.ಟಿ. ರವಿ ಹೇಳಿದರು.
ಸಿದ್ದರಾಮಯ್ಯ ಮಂದಿರ ನಿರ್ಮಾಣ ಹೋರಾಟ ಸಂದರ್ಭದಲ್ಲಿ ಒಂದು ಹೇಳಿಕೆಯೂ ಕೊಟ್ಟಿಲ್ಲ. ಮಾಜಿ ಸಚಿವ ಆಂಜನೇಯ ಹೇಳಿಕೆ ಕೊಟ್ಟಿಲ್ಲ. ಇದರ ಮೇಲೆ ಅವರಿಗೆ ಆಮಂತ್ರಣ ಪತ್ರಿಕೆ ಬರುತ್ತದೋ ಬಿಡುತ್ತದೆಯೋ ಗೊತ್ತಿಲ್ಲ, ಆದರೆ, ಪ್ರತಿ ಮನೆಗೆ ಮಂತ್ರಾಕ್ಷತೆ ಬಂದೇ ಬರುತ್ತದೆ. ಸಿದ್ದರಾಮಯ್ಯ ಮತ್ತು ಆಂಜನೇಯ ಅವರ ಮನೆಗೆ ಅಯೋಧ್ಯೆ ಮಂತ್ರಾಕ್ಷತೆ ತಲುಪುತ್ತದೆ ಎಂದರು.
Ct Ravi slams Cm Siddaramaiah over Ayodhya invitation. Says even I haven't got any invitation so far
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am