ಬ್ರೇಕಿಂಗ್ ನ್ಯೂಸ್
04-01-24 08:18 pm Mangaluru Correspondent ಕರ್ನಾಟಕ
ಬೆಂಗಳೂರು ಜ 03: ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಮಂದಿರ ಉದ್ಘಾಟನೆಗೆ ಎಲ್ಲರಿಗೂ ಆಹ್ವಾನ ಕೊಡಬೇಕು ಎಂದು ನಿರೀಕ್ಷೆ ಮಾಡಬೇಕಿಲ್ಲ. ಆದರೆ ಆಹ್ವಾನವಿಲ್ಲ ಎಂದು ಹೇಳುವ ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದಿದ್ದರು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಈ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಎಲ್ಲ ರಾಮಭಕ್ತರಿಗೆ ಸೇರಿದೆ. ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ದೇವಸ್ಥಾನದ ಉದ್ಘಾಟನೆಗೆ ಹೋಗಿದ್ದು, ಪೂಜೆ ಮಾಡಲು ಒಳಗೆ ಹೋಗಿಲ್ಲ. ಆದರೆ ಮಸೀದಿಗೆ ಕರೆದರೆ ಟೋಪಿ ಹಾಕಿಕೊಂಡು ಓಡುತ್ತಾರೆ. ಕೇಸರಿ ಪೇಟವನ್ನು ಕೂಡ ಅವರು ಹಾಕಿಕೊಳ್ಳುವುದಿಲ್ಲ. ದೇವಸ್ಥಾನದ ಒಳಗೆ ಹೋಗಲು ಹಿಂಜರಿಯುತ್ತಾರೆ. ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ರಾಮನ ಜನ್ಮ ಪ್ರಮಾಣಪತ್ರ ಕೇಳಿದ್ದರು, ರಾಮ ಕಾಲ್ಪನಿಕ ವ್ಯಕ್ತಿ ಎಂದು ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದರು ಎಂದರು.
ಕರಸೇವಕ ಶ್ರೀಕಾಂತ ಪೂಜಾರಿ ಅವರ ವಿರುದ್ಧ ಬೇರೆ ಪ್ರಕರಣಗಳಿವೆ ಎಂದು ಹೇಳುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮಾಯಕರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡಿದ್ದಾರೆ. ಬೇರೆ ಪ್ರಕರಣಗಳಲ್ಲಿ ಯಾರೂ ಸಿಗದಿದ್ದಾಗ ಶ್ರೀಕಾಂತ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಶ್ರೀಕಾಂತ ಅವರು ಗಾಯಗೊಂಡಿದ್ದು, ಬದುಕು ಸಾವಿನ ನಡುವೆ ಹೋರಾಡುತ್ತಿದ್ದಾರೆ. ಅವರನ್ನು ಬಂಧಿಸುವ ಅವಶ್ಯಕತೆ ಏನಿತ್ತು? ರಾಜ್ಯದಲ್ಲಿ ದೀರ್ಘಾವಧಿಯಿಂದ ಬಾಕಿ ಇರುವ ಸುಮಾರು 50-60 ಸಾವಿರ ಹಾಗೂ ಬೆಂಗಳೂರಿನಲ್ಲಿ ಸುಮಾರು 10 ಸಾವಿರ ಪ್ರಕರಣಗಳಿವೆ. ಎಲ್ಲರನ್ನೂ ಬಂಧಿಸಿದರೆ ಜೈಲಿನಲ್ಲಿರಿಸಲು ಜಾಗ ಇರುವುದಿಲ್ಲ.
ಕಾಂಗ್ರೆಸ್ನವರು ಬೇಕಾದವರಿಗೆ ಕಾಫಿ ಕೊಟ್ಟು ಕಳಿಸುತ್ತಾರೆ. ಅವರು ಕ್ರಿಮಿನಲ್ ಎಂದು ಹೇಳುವ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಇಲ್ಲ. ಅವರು ಕ್ರಿಮಿನಲ್ ಎನ್ನುವುದಾದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್, ಶಶಿ ತರೂರ್ ಯಾವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಶ್ನೆ ಮಾಡಿದರು
R. Ashok criticizes According to Siddaramaiah, he enters mosques but not temples. Lately, instead of going inside the temple, he went to the mosque while donning the Muslim headgear. He blasted, saying he needed Muslims and doesn't want Hindus.
18-04-26 02:43 pm
HK News Staffer
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm