ಬ್ರೇಕಿಂಗ್ ನ್ಯೂಸ್
04-01-24 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.4: ರಾಜ್ಯ ಬಿಜೆಪಿ ವಕ್ತಾರರು, ಸಾಮಾಜಿಕ ಜಾಲತಾಣ, ಮಾಧ್ಯಮ ವಿಭಾಗ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ಸಂಚಾಲಕರ ಹುದ್ದೆಗೆ ನೇಮಕಗೊಳಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಮಾಡಿದ್ದಾರೆ.
ಮುಖ್ಯ ವಕ್ತಾರರಾಗಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ವಕ್ತಾರ ಹುದ್ದೆಗೆ ಇತರ 10 ಮಂದಿಯನ್ನು ನೇಮಿಸಲಾಗಿದ್ದು, ಅದರಲ್ಲಿ ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಹೆಸರನ್ನೂ ಸೇರ್ಪಡೆ ಮಾಡಲಾಗಿದೆ. ಉಳಿದಂತೆ ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಕೆ.ಎಸ್. ನವೀನ್, ಎಂಜಿ ಮಹೇಶ್, ಎಚ್.ಎನ್ ಚಂದ್ರಶೇಖರ್, ಡಾ.ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ. ಗೌಡ, ಎಚ್. ವೆಂಕಟೇಶ್ ದೊಡ್ಡೇರಿ ಅವರನ್ನು ವಕ್ತಾರರನ್ನಾಗಿ ಮಾಡಲಾಗಿದೆ.


ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪ್ರಶಾಂತ ಮಾಕನೂರು, ನರೇಂದ್ರ ಮೂರ್ತಿ ಸಹ ಸಂಚಾಲಕರಾಗಿದ್ದಾರೆ. ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ನಿತಿನ್ ರಾಜ್ ನಾಯಕ್ ಸಂಚಾಲಕ, ಶ್ರೀಮತಿ ಶ್ಯಾಮಲಾ ರಘುನಂದನ್ ಸಹ ಸಂಚಾಲಕ ಆಗಿದ್ದಾರೆ. ಮಾಧ್ಯಮ ವಿಭಾಗಕ್ಕೆ ಕರುಣಾಕರ ಖಾಸಲೆ ಸಂಚಾಲಕ, ಪ್ರಶಾಂತ್ ಕೆಡೆಂಜಿ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಹರಿಪ್ರಕಾಶ್ ಕೋಣೆಮನೆ ಈ ಹಿಂದೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಸಂಪಾದಕರಾಗಿದ್ದು, ಹಾಲಿ ವಿಸ್ತಾರ ಸುದ್ದಿ ವಾಹಿನಿಯ ಮುಖ್ಯಸ್ಥರಾಗಿದ್ದಾರೆ. ದಿಢೀರ್ ಆಗಿ ಪಕ್ಷದ ಹುದ್ದೆಗೆ ನೇಮಕಗೊಂಡಿರುವುದು ಹೊಸ ಬೆಳವಣಿಗೆ.
Hariprakash Konemane appointed as BJP spokesperson of Karnataka. Hariprakash Konemane appointed as BJP spokesperson of Karnataka
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm