ಬ್ರೇಕಿಂಗ್ ನ್ಯೂಸ್
05-01-24 01:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.05: ಪ್ರಥಮ ವರ್ಷದ ಎಂಜಿನಿಯರ್ ವಿದ್ಯಾರ್ಥಿ ಡಬಲ್ ಬ್ಯಾರಲ್ ಬಂದೂಕಿ ನಿಂದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪೀಣ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮುಕ್ಕೋಡ್ಲು ಗ್ರಾಮದ ಕೆ.ಡಿ.ತಿಮ್ಮಯ್ಯ ಎಂಬವರ ಪುತ್ರ ವಿಶು ಉತ್ತಪ್ಪ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಮೃತ ವಿಶು ಉತ್ತಪ್ಪ ತಂದೆ ಕೆ.ಡಿ.ತಿಮ್ಮಯ್ಯ ಕುಟುಂಬ ಸಮೇತ ಏಳು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ನೈಸ್ ರಸ್ತೆಯ ಟೋಲ್ ನಲ್ಲಿ ಸಂಗ್ರಹವಾದ ಹಣವನ್ನು ಬ್ಯಾಂಕ್ಗೆ ಜಮೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರಿಗೆ ವಿಶು ಉತ್ತಪ್ಪ ಒಬ್ಬನೇ ಮಗ. ಈತ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಜಿನಿಯರ್ ವ್ಯಾಸಂಗ ಮಾಡುತ್ತಿದ್ದ. ತಿಮ್ಮಯ್ಯ ಪರವಾನಗಿ ಹೊಂದಿದ್ದ ಡಬಲ್ ಬ್ಯಾರಲ್ ಬಂದೂಕು ಹೊಂದಿದ್ದು, ಕೆಲಸ ಮಾಡುವ ಸ್ಥಳಕ್ಕೆ ಬಂದೂಕು ಅಗತ್ಯವಿಲ್ಲವಾದರಿಂದ ಮನೆಯಲ್ಲೇ ಇಟ್ಟು ಹೋಗುತ್ತಿದ್ದರು.
ಸಾವಿಗೂ ಮುನ್ನ ಸಾರಿ ಎಂದು ಅಮ್ಮನಿಗೆ ಕರೆ:
ಕೆಲ ದಿನಗಳಿಂದ ವಿಶು ಉತ್ತಪ್ಪ ಅಷ್ಟಾಗಿ ಸಕ್ರಿಯವಾಗಿರಲಿಲ್ಲ. ಮನೆಯಲ್ಲೇ ಮಂಕಾಗಿದ್ದ. ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ ಎಂದು ಹೇಳಲಾಗಿದೆ. ಈ ಮಧ್ಯೆ ಬುಧವಾರ ಮಧ್ಯಾಹ್ನ ತಿಮ್ಮಯ್ಯ ದಂಪತಿ ಸಾಮಾಗ್ರಿ ತರಲು ಹೊರಗಡೆ ಹೋಗಿದ್ದಾರೆ. ಕೆಲ ಸಮಯದ ಬಳಿಕ ತಾಯಿಗೆ ಕರೆ ಮಾಡಿ ಕ್ಷಮಿಸಿ ಎಂದು ಕರೆ ಮಾಡಿದ್ದಾನೆ. ಆಗ ತಾಯಿ, ಯಾವ ವಿಚಾರಕ್ಕೆ ಕ್ಷಮೆ ಕೇಳುವೆ ಎಂದು ಸಮಾಧಾನಪಡಿಸಿದ್ದಾರೆ.
ಆ ನಂತರ ತಂದೆಗೆ ಕರೆ ಮಾಡಿ, “ನಾನು ಇನ್ಮುಂದೆ ಯಾವುದೇ ತಪ್ಪು ಮಾಡುವುದಿಲ್ಲ’ ಎಂದು ಹೇಳಿ, ಕರೆ ಸ್ಥಗಿತಗೊಳಿಸಿದ್ದಾನೆ. ಆ ಬಳಿಕ ಡಬಲ್ ಬ್ಯಾರಲ್ ಬಂದೂಕಿನಿಂದ ಎಡಭಾಗದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಮಾತಿನಿಂದ ಅನುಮಾನಗೊಂಡ ಪೋಷಕರು ಕೂಡಲೇ ಮನೆಗೆ ವಾಪಸ್ ಬಂದಿದ್ದಾರೆ. ಅಷ್ಟರಲ್ಲಿ ಪುತ್ರ ವಿಶು ಉತ್ತಪ್ಪ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ಪೋಷಕರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದರು.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri 19-year-old student shoots himself in Bengalore after argument with mother over studies. According to police, Vishu Uthappa, a resident of Peenya in north Bengaluru, killed himself around 4 pm on Tuesday, when his parents had gone out to buy groceries. Vishu’s father KD Thammaiah, a native of Madikeri, works as a security staffer at the NICE Road toll plaza, the police said.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm