ಬ್ರೇಕಿಂಗ್ ನ್ಯೂಸ್
05-01-24 05:49 pm Bangalore Correspondent ಕರ್ನಾಟಕ
ಬೆಂಗಳೂರು, ಜ 05: ನನ್ನ ಮಾನ ಹಾನಿ ಮಾಡುವ ಪೋಸ್ಟ್ ಅನ್ನು ಕೂಡಲೇ ಡಿಲೀಟ್ ಮಾಡಿ ಕ್ಷಮೆಯಾಚಿಸಿ, ಇಲ್ಲವಾದರೆ ನಿಮ್ಮ ಮೇಲೆ ನಾನು ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಮಾಜಿ ಶಾಸಕ ಸಿ ಟಿ ರವಿ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ʼನಾನು ಕರಸೇವಕ, ನನ್ನನ್ನೂ ಬಂಧಿಸಿʼ ಎಂಬ ಬಿಜೆಪಿಯ ಅಭಿಯಾನವನ್ನು ವ್ಯಂಗ್ಯಾತ್ಮಕವಾಗಿ ಟೀಕಿಸಿದ್ದ ಕಾಂಗ್ರೆಸ್, ಸಿ ಟಿ ರವಿ ಅವರನ್ನು ಉಲ್ಲೇಖಿಸಿ ʼ ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ. ನನ್ನನ್ನೂ ಬಂಧಿಸಿʼ ಎಂಬ ಪೋಸ್ಟರ್ ಟ್ವೀಟ್ ಮಾಡಿತ್ತು.
ಇದಕ್ಕೆ ಪ್ರತಿಕ್ರಿಯಿಸಿರುವ ಸಿ ಟಿ ರವಿ, ಕಾಂಗ್ರೆಸ್ಸಿಗರೇ ಇದು ನಿಮ್ಮ ಹತಾಶೆಯ ಪರಮಾವಧಿ. ನಾನು ಪ್ರಯಾಣಿಸುತಿದ್ದ ಕಾರು ಅಪಘಾತವಾಗಿದ್ದು ನಿಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ. ಅಂದೇ ನಿಮ್ಮ ನಾಯಕರೆಲ್ಲ ಪೋಲೀಸರ ಮೇಲೆ ಒತ್ತಡ ಹೇರಿ ಚಿಕ್ಕಮಗಳೂರು - ಬೆಂಗಳೂರು ಹೆದ್ದಾರಿಯಲ್ಲಿನ ಎಲ್ಲಾ ಟೋಲ್ ಗಳಲ್ಲಿರುವ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಯಾರು ಕಾರು ಚಾಲನೆ ಮಾಡುತ್ತಿದ್ದರು ಎಂಬುದನ್ನು ಪರಿಶೀಲನೆ ನಡೆಸಿ ನನ್ನ ಚಾಲಕ ಕಾರನ್ನು ಚಲಾಯಿಸುತ್ತಿರುವುದನ್ನು ಖಚಿತಪಡಿಸಿಕೊಂಡಿದ್ದರು ಎಂದು ಹೇಳಿದ್ದಾರೆ.
ಈ ಕಾರಣಕ್ಕೇ ನಿಮ್ಮದೇ ಸರ್ಕಾರ ಇದ್ದರೂ ಅಂದು ನನ್ನ ಮೇಲೆ ಕೇಸು ದಾಖಲಾಗಲಿಲ್ಲ. ಆದರೆ ಈಗ ನನ್ನ ಮೇಲೆ ಸುಳ್ಳು ಆರೋಪ ಮಾಡುವ, ನನ್ನ ಮಾನ ಹಾನಿ ಮಾಡುವ ಈ ಪೋಸ್ಟ್ ಕೂಡಲೇ ಡಿಲೀಟ್ ಮಾಡಿ ಕ್ಷಮೆಯಾಚಿಸಿ, ಇಲ್ಲವಾದರೆ ನಿಮ್ಮ ಮೇಲೆ ನಾನು ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ಸಿಗರೇ ಇದು ನಿಮ್ಮ ಹತಾಶೆಯ ಪರಮಾವಧಿ !
— C T Ravi 🇮🇳 ಸಿ ಟಿ ರವಿ (@CTRavi_BJP) January 5, 2024
ನಾನು ಪ್ರಯಾಣಿಸುತಿದ್ದ ಕಾರು ಅಪಘಾತವಾಗಿದ್ದು ನಿಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ.
ಅಂದೇ ನಿಮ್ಮ ನಾಯಕರೆಲ್ಲ ಪೋಲೀಸರ ಮೇಲೆ ಒತ್ತಡ ಹೇರಿ ಚಿಕ್ಕಮಗಳೂರು - ಬೆಂಗಳೂರು ಹೆದ್ದಾರಿಯಲ್ಲಿನ ಎಲ್ಲಾ ಟೋಲ್ ಗಳಲ್ಲಿರುವ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಯಾರು ಕಾರು ಚಾಲನೆ ಮಾಡುತ್ತಿದ್ದರು… https://t.co/CQ81zGDmaR
,@BJP4Karnataka ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು! @CTRavi_BJP ಅವರೇ, ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ? pic.twitter.com/jn3lQUm2Nn
— Karnataka Congress (@INCKarnataka) January 5, 2024
Congress tweets edited pic of CT Ravi Saying i have killed two in car accident arrest me, tweet war. Ct Ravi has asked congress to delete the tweet or else would take legal action.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm