ಬ್ರೇಕಿಂಗ್ ನ್ಯೂಸ್
06-01-24 01:34 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.06: ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಇತರ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಹಾಸನ ಜಿಲ್ಲೆಯ ಅರಕಲಕೂಡಿನ ಮಣಿಕಂಠ (26), ಪವನ್ (23), ಚಂದನ್ (31) ಹಾಗೂ ಹರೀಶ್ (34) ಎಂದು ಗುರುತಿಸಲಾಗಿದೆ.
ಮೊದಲು, ಬೆಂಗಳೂರಿನಿಂದ ಶಿರಡಿ ಹಾಗೂ ಗೋವಾಕ್ಕೆ ಹೊರಟಿದ್ದ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಎರಡೂ ಕಾರಿನಲ್ಲಿದ್ದ 7 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಆಗ ಇಬ್ಬರನ್ನು ಆಂಬ್ಯುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ನಾಲ್ಕು ಜನರು ರಸ್ತೆ ಪಕ್ಕದಲ್ಲಿ ಮಾತನಾಡುತ್ತ ನಿಂತಿದ್ದರು. ಈ ವೇಳೆ ಹಾವೇರಿ ಕಡೆಯಿಂದ ಬಂದ ಲಾರಿಯು ಅಪಘಾತವಾಗಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಪಕ್ಕದಲ್ಲೇ ನಿಂತಿದ್ದ ನಾಲ್ವರೂ ತೀವ್ರ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಹಾಗೂ ಕುಂದಗೋಳ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಶವಗಳನ್ನು ಕಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಕುಂದಗೋಳ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈ ಬಗ್ಗೆ ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸಲಾಗಿದೆ. ಬೆಳಗ್ಗೆ ಮಂಜು ಆವರಿಸಿದ್ದ ಕಾರಣ ಅಪಘಾತ ಸಂಭವಿಸಿರಬಹುದು ಎಂಬ ಸಂಶಯವಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ' ಎಂದು ಎಸ್ಪಿ ಗೋಪಾಲ್ ಬ್ಯಾಕೋಡ್ ಮಾಹಿತಿ ನೀಡಿದ್ದಾರೆ.
Hubli accident, car truck, four youths from hassan killed on spot.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm