ಬ್ರೇಕಿಂಗ್ ನ್ಯೂಸ್
06-01-24 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಸೂರ್ಯನ ಕುರಿತ ಅಧ್ಯಯನಕ್ಕಾಗಿ ಭಾರತದಿಂದ ಮೊದಲ ಬಾರಿಗೆ ಕಳಿಸಲ್ಪಟ್ಟಿದ್ದ ಆದಿತ್ಯ ಎಲ್- 1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ನಿಗದಿತ ಕಕ್ಷೆ ತಲುಪಿದ್ದು, ಭಾರತ ಅಂತರಿಕ್ಷ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ.
ಆದಿತ್ಯ ಎಲ್-1 ನಿಗದಿತ ಕಕ್ಷೆ ಸೇರಿದ ಬಗ್ಗೆ ಇಸ್ರೋ ಅಧಿಕೃತವಾಗಿ ಮಾಹಿತಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ. 15 ಲಕ್ಷ ಕಿಮೀ ಪ್ರಯಾಣಿಸಿ ನಿಗದಿತ ಕಕ್ಷೆ ಸೇರಿದ್ದು, ಸೂರ್ಯನ ಕುರಿತ ವಿಸ್ಮಯಗಳನ್ನು ಭೂಮಿಯ ಜೊತೆಗೆ ಹಂಚಿಕೊಳ್ಳಲಿದೆ ಎಂದು ತಿಳಿಸಿದೆ. ಇಸ್ರೋ ಸಾಧನೆಯನ್ನು ಅಭಿನಂದಿಸಿರುವ ಪ್ರಧಾನಿ ಮೋದಿ, ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಇದಕ್ಕೆ ಕಾರಣವಾದ ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ಸೆಪ್ಟಂಬರ್ 2ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್-1 ಹೊತ್ತ ಬಾಹ್ಯಾಕಾಶ ನೌಕೆ ಗಗನಕ್ಕೆ ಹಾರಿತ್ತು. ನಾಲ್ಕು ತಿಂಗಳ ಸತತ ಯಾನದ ಬಳಿಕ 15 ಲಕ್ಷ ಕಿಮೀ ದೂರದ ಕಕ್ಷೆಯನ್ನು ತಲುಪಿದೆ. 15 ಲಕ್ಷ ಕಿಮೀ ದೂರದ ಈ ಕಕ್ಷೆ ಸೂರ್ಯ ಮತ್ತು ಭೂಮಿ ನಡುವಿನ ಒಟ್ಟು ದೂರದ ಒಂದನೇ ಭಾಗವಾಗಿದ್ದು, ಅಲ್ಲಿದ್ದುಕೊಂಡೇ ಸೂರ್ಯನ ಕುರಿತು ಅಧ್ಯಯನ ನಡೆಸಲಿದೆ. ಈ ಕಕ್ಷೆಯನ್ನು ವೈಜ್ಞಾನಿಕ ಭಾಷೆಯಲ್ಲಿ ಲ್ಯಾಂಗ್ರೇಜ್ ಪಾಯಿಂಟ್ ಎಂದು ಕರೆಯಲಾಗುತ್ತದೆ.
ಆದಿತ್ಯ ಎಲ್- 1 ಸಂಪೂರ್ಣ ದೇಶೀಯವಾಗಿ ನಿರ್ಮಿಸಲಾದ ಬಾಹ್ಯಾಕಾಶ ನೌಕೆಯಾಗಿದ್ದು, ಇದರಲ್ಲಿ ಒಟ್ಟು ಏಳು ಮಾದರಿಯ ಉಪಕರಣಗಳಿವೆ. ಸೂರ್ಯ ಬಿಡುಗಡೆಗೊಳಿಸುವ ಕಿರಣಗಳು, ಪ್ಲಾಸ್ಮಾ, ಸೌರ ಜ್ವಾಲೆಗಳ ಬಗ್ಗೆ ಅಧ್ಯಯನ ನಡೆಸಲಿದ್ದು, ಕಾಲ ಕಾಲಕ್ಕೆ ಇಸ್ರೋಗೆ ಮಾಹಿತಿ ನೀಡಲಿದೆ.
Aditya L1, the Indian Space Research Organisation's (ISRO) maiden solar mission, successfully entered its final manoeuvre to reach its destination and injected into its final orbit today.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm