ಬ್ರೇಕಿಂಗ್ ನ್ಯೂಸ್
06-01-24 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಸೂರ್ಯನ ಕುರಿತ ಅಧ್ಯಯನಕ್ಕಾಗಿ ಭಾರತದಿಂದ ಮೊದಲ ಬಾರಿಗೆ ಕಳಿಸಲ್ಪಟ್ಟಿದ್ದ ಆದಿತ್ಯ ಎಲ್- 1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ನಿಗದಿತ ಕಕ್ಷೆ ತಲುಪಿದ್ದು, ಭಾರತ ಅಂತರಿಕ್ಷ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ.
ಆದಿತ್ಯ ಎಲ್-1 ನಿಗದಿತ ಕಕ್ಷೆ ಸೇರಿದ ಬಗ್ಗೆ ಇಸ್ರೋ ಅಧಿಕೃತವಾಗಿ ಮಾಹಿತಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ. 15 ಲಕ್ಷ ಕಿಮೀ ಪ್ರಯಾಣಿಸಿ ನಿಗದಿತ ಕಕ್ಷೆ ಸೇರಿದ್ದು, ಸೂರ್ಯನ ಕುರಿತ ವಿಸ್ಮಯಗಳನ್ನು ಭೂಮಿಯ ಜೊತೆಗೆ ಹಂಚಿಕೊಳ್ಳಲಿದೆ ಎಂದು ತಿಳಿಸಿದೆ. ಇಸ್ರೋ ಸಾಧನೆಯನ್ನು ಅಭಿನಂದಿಸಿರುವ ಪ್ರಧಾನಿ ಮೋದಿ, ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಇದಕ್ಕೆ ಕಾರಣವಾದ ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ಸೆಪ್ಟಂಬರ್ 2ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್-1 ಹೊತ್ತ ಬಾಹ್ಯಾಕಾಶ ನೌಕೆ ಗಗನಕ್ಕೆ ಹಾರಿತ್ತು. ನಾಲ್ಕು ತಿಂಗಳ ಸತತ ಯಾನದ ಬಳಿಕ 15 ಲಕ್ಷ ಕಿಮೀ ದೂರದ ಕಕ್ಷೆಯನ್ನು ತಲುಪಿದೆ. 15 ಲಕ್ಷ ಕಿಮೀ ದೂರದ ಈ ಕಕ್ಷೆ ಸೂರ್ಯ ಮತ್ತು ಭೂಮಿ ನಡುವಿನ ಒಟ್ಟು ದೂರದ ಒಂದನೇ ಭಾಗವಾಗಿದ್ದು, ಅಲ್ಲಿದ್ದುಕೊಂಡೇ ಸೂರ್ಯನ ಕುರಿತು ಅಧ್ಯಯನ ನಡೆಸಲಿದೆ. ಈ ಕಕ್ಷೆಯನ್ನು ವೈಜ್ಞಾನಿಕ ಭಾಷೆಯಲ್ಲಿ ಲ್ಯಾಂಗ್ರೇಜ್ ಪಾಯಿಂಟ್ ಎಂದು ಕರೆಯಲಾಗುತ್ತದೆ.
ಆದಿತ್ಯ ಎಲ್- 1 ಸಂಪೂರ್ಣ ದೇಶೀಯವಾಗಿ ನಿರ್ಮಿಸಲಾದ ಬಾಹ್ಯಾಕಾಶ ನೌಕೆಯಾಗಿದ್ದು, ಇದರಲ್ಲಿ ಒಟ್ಟು ಏಳು ಮಾದರಿಯ ಉಪಕರಣಗಳಿವೆ. ಸೂರ್ಯ ಬಿಡುಗಡೆಗೊಳಿಸುವ ಕಿರಣಗಳು, ಪ್ಲಾಸ್ಮಾ, ಸೌರ ಜ್ವಾಲೆಗಳ ಬಗ್ಗೆ ಅಧ್ಯಯನ ನಡೆಸಲಿದ್ದು, ಕಾಲ ಕಾಲಕ್ಕೆ ಇಸ್ರೋಗೆ ಮಾಹಿತಿ ನೀಡಲಿದೆ.
Aditya L1, the Indian Space Research Organisation's (ISRO) maiden solar mission, successfully entered its final manoeuvre to reach its destination and injected into its final orbit today.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 11:13 am
HK News Staffer
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am