ಬ್ರೇಕಿಂಗ್ ನ್ಯೂಸ್
08-01-24 02:52 pm HK News Desk ಕರ್ನಾಟಕ
ಬೆಳಗಾವಿ, ಜ.8: ದೇವಸ್ಥಾನ ಒಡೆದು ಮಸೀದಿ ಕಟ್ಟಿದ ಮುಸ್ಲಿಮರು ತಾವಾಗೇ ಅವನ್ನು ಕಿತ್ತು ಹಾಕಬೇಕು. ಇಲ್ಲವಾದ್ರೆ ರಾಮನ ಭಕ್ತರು ನಾವು ಮಸೀದಿ ಕಿತ್ತು ಹಾಕುತ್ತೇವೆ ಎಂದು ಕೆ.ಎಸ್.ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, 500 ವರ್ಷದ ಕೆಳಗೆ ರಾಮ ಹುಟ್ಟಿದ ಜಾಗದಲ್ಲಿದ್ದ ದೇವಸ್ಥಾನ ಕಿತ್ತು ಹಾಕಿದ್ದರು. ಬಾಬರ್ ನಂತವನು ಬಂದು ಬಾಬ್ರಿ ಮಸೀದಿ ಕಟ್ಟಿದ್ದ. ಬಾಬ್ರಿ ಮಸೀದಿ ಅಂದ್ರೆ ಹೇಗೆ? ಈಗ ಯಾರಾದ್ರೂ ಮಂದಿರ ಕೆಡವಿ ಮಸೀದಿ ಕಟ್ಟಿದರೆ ಅವರಪ್ಪನಿಗೆ ಹುಟ್ಟಿದೋನು ಅಂತ ಕರೀತಿನಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಅರ್ಧ ಮಸೀದಿ ಹೇಗೆ ಬಂತು? ಮಥುರಾದಲ್ಲಿ ಅರ್ಧ ಮಸೀದಿ ಹೇಗೆ ಬಂತು? ಲಾಠಿ ಗೋಲಿ ಖಾಯೆಂಗೆ ಮಂದಿರ ವಹಿ ಬನಾಯೇಂಗೆ ಎಂದು ಕೂಗ್ತಿದ್ದೆವು. ಇನ್ನೆರಡು ದೇವಸ್ಥಾನಗಳಿಗೆ ಕೋರ್ಟ್ ಆದೇಶ ನೀಡಿದೆ. ಅಲ್ಲಿರುವ ಮಸೀದಿಗಳು ಧ್ವಂಸ ಆಗುತ್ತೆ, ದೇವಸ್ಥಾನ ತಲೆ ಎತ್ತುತ್ತದೆ. ದೇವಸ್ಥಾನ ಒಡೆದು ಮಸೀದಿ ಕಟ್ಟಿದ ಮುಸ್ಲಿಮರು ನೀವಾಗಿ ನೀವೇ ಕಿತ್ತು ಹಾಕಬೇಕು. ಇಲ್ಲವಾದ್ರೆ ರಾಮನ ಭಕ್ತರು ನಾವು ಮಸೀದಿ ಕಿತ್ತು ಹಾಕುತ್ತೇವೆ ಎಂದಿದ್ದಾರೆ.
ಸಿದ್ದರಾಮಯ್ಯ ನಾವು ಜಾತ್ಯತೀತವಾದಿಗಳು ಅಂತಾರೆ. ನಾವು ನಿಮಗಿಂತ ಜಾತ್ಯತೀತವಾದಿಗಳು. ಹಿಂದೂ ಮುಸ್ಲಿಂ ಅನ್ಯೋನ್ಯವಾಗಿರಬೇಕು ಎನ್ನುವವರು ನಾವು. ನೀವು ನಮಾಜ್ ಮಾಡ್ಕೊಳ್ಳಿ, ನಾವು ಅದರ ತಂಟೆಗೆ ಬರಲ್ಲ. ಬಾಬರ್ ಕಟ್ಟಡ ಈ ದೇಶದ ಜನರಿಗೆ ನೀವು ಗುಲಾಮರಾಗಿದ್ದಿರಿ ಅಂತ ಹೇಳ್ತಿತ್ತು. ನೀವಾಗಿ ನೀವೇ ಮಥುರಾ ಹಾಗೂ ಕೃಷ್ಣಾದ ಮಸೀದಿ ತೆಗೆಯಿರಿ. ತೆಗೆಯದಿದ್ದರೆ ಕೊಲೆಗಳಾಗುತ್ತೊ ಇನ್ನೇನಾಗುತ್ತೊ ಗೊತ್ತಿಲ್ಲ. ಅಧಿಕಾರದಾಸೆಗೆ ಪಾಕಿಸ್ತಾನವನ್ನು ನೆಹರೂ ಮಾಡಿದರು. ಈ ದೇಶದಲ್ಲಿ ಈಗಾಗಲೇ ತ್ರಿವಳಿ ತಲಾಕ್ ಬಂದಿದೆ. ಒಂದು ಗಂಡಿಗೆ ಒಂದು ಹೆಣ್ಣು ಎಂದು ಸಂದೇಶ ಸಾರಿದೆ. ನಮಗೆ ಒಂದು ಹೆಣ್ಣು ಒಂದು ಗಂಡು ಇತ್ತು. ಆದರೆ ಮುಸ್ಲಿಮರಿಗೆ ಹಮ್ ಪಾಂಚ್ ಹಮ್ಕೊ ಪಚ್ಚಿಸ್ ಎಂಬಂತಾಗಿದೆ.
ಗೋವು ನಮ್ಮ ತಾಯಿ. ಗೋಹತ್ಯೆ ನಿಷೇಧ ಮಾಡಿದ್ದೀವಿ. ಗೋಹತ್ಯೆ ನಿಷೇಧ ಕಾಯ್ದೆಯನ್ನು ತಾಕತ್ತಿದ್ದರೆ ಹಿಂಪಡೆಯಿರಿ. ಅದನ್ನ ನಾವು ಹಿಂದೆ ತೆಗೆದುಕೊಳ್ಳಲು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
KS Eshwarappa, former Karnataka Chief Minister and senior Bharatiya Janata Party (BJP) leader, on Sunday again warned the Muslims of dire consequences if they did not vacate the mosques allegedly constructed on demolished temple lands.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am