ಬ್ರೇಕಿಂಗ್ ನ್ಯೂಸ್
12-01-24 02:14 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜ.12: ಶ್ರೀರಾಮಚಂದ್ರ ಎಲ್ಲರಿಗೂ ದೇವರು. ಕಾಂಗ್ರೆಸಿನಲ್ಲೂ ಬಹಳಷ್ಟು ಮಂದಿ ರಾಮನ ಭಕ್ತರಿದ್ದಾರೆ. ರಾಮನ ವಿಚಾರದಲ್ಲಿ ರಾಜಕೀಯ ಮಾಡಲು ರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಎಂದು ಹೇಳಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಗೈರಾಗುವ ವಿಚಾರದ ಬಗ್ಗೆ ಸುದ್ದಿಗಾರರ ಜೊತೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನಾವೂ ಹಿಂದುಗಳೇ, ನಾನೂ ಕೂಡ ಶ್ರೀರಾಮನ ಭಕ್ತ.
![]()
ನಮಗೂ ಶ್ರೀ ರಾಮಚಂದ್ರ ಆರಾಧ್ಯ ದೇವರೇ. ಶ್ರೀರಾಮ ಹಿಂದೂಗಳ ಆರಾಧ್ಯ ದೈವ. ಕಾಂಗ್ರೆಸ್ನಲ್ಲೂ ಶ್ರೀರಾಮನ ಭಕ್ತರಿದ್ದಾರೆ. ಶ್ರೀರಾಮಚಂದ್ರ ಏನ್ ಬಿಜೆಪಿಯವರ ಅಪ್ಪನ ಮನೆ ಆಸ್ತಿ ಏನೂ ಅಲ್ಲ ಎಂದು ಹೇಳಿದರು.
ನಾವೂ ಶ್ರೀರಾಮನನ್ನು ಆರಾಧಿಸುತ್ತೇವೆ ಎಂದ ಪ್ರದೀಪ್ ಈಶ್ವರ್, ಅಷ್ಟೇ ಅಲ್ಲ ಅಲ್ಲಾಹ್, ಏಸುವನ್ನು ಗೌರವಿಸುತ್ತೇವೆ. ಬಿಜೆಪಿಯವರ ತರಹ ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ ತರುವ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್ ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುತ್ತದೆ ಎಂದು ಹೇಳಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವಿರುದ್ಧವೂ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ಚರ್, ಆತನಷ್ಟು ಅಯೋಗ್ಯ, ಮುಠ್ಠಾಳ ಇನ್ನೊಬ್ಬರಿಲ್ಲ. 45 ವರ್ಷ ರಾಜಕೀಯ ಅನುಭವ ಹೊಂದಿರುವ ಸಿದ್ಧರಾಮಯ್ಯರ ಬಗ್ಗೆ ಮಾತಾಡ್ತಾರೆ. ಪ್ರತಾಪ್ ಸಿಂಹ ಅವರೇ ಬಾಯ್ ಮುಚ್ಚಿಕೊಂಡು ಇರಬೇಕು, ಬಾಯಿ ತೆವಲು ಕಡಿಮೆ ಮಾಡಬೇಕು ಎಂದರು.
ಲೋಕಸಭೆಯ ಪ್ರವೇಶಕ್ಕೆ ಪಾಸ್ ಕೊಟ್ಟ ಪ್ರತಾಪ್ ಸಿಂಹ ದೇಶದ್ರೋಹಿ ಅಲ್ವಾ ಎಂದು ಪ್ರಶ್ನಿಸಿದ ಶಾಸಕ ಪ್ರದೀಪ್ ಈಶ್ವರ್, ಒಂದು ವೇಳೆ ನಾವು ಪಾಸ್ ಕೊಟ್ಟಿದ್ರೆ ಏನ್ ಪಟ್ಟ ಕಟ್ಟುತ್ತಿದ್ರಿ ಎಂದು ಪ್ರಶ್ನಿಸಿದರು. ಇನ್ನು, ಕೇಂದ್ರ ಸರ್ಕಾರ ನಮ್ಮ ಪಾಲಿನ ಅಕ್ಕಿ ಕೊಡ್ತಿದ್ದಾರೆಯೇ ಹೊರತು, ಅವರ ಮನೆಯಿಂದ ತಂದು ಕೊಡ್ತಿಲ್ಲ ಎಂದರು.
MLA Pradeep Eshwar questions asking is Rama BJPs asset.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 11:13 am
HK News Staffer
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am