ಬ್ರೇಕಿಂಗ್ ನ್ಯೂಸ್
12-01-24 02:14 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜ.12: ಶ್ರೀರಾಮಚಂದ್ರ ಎಲ್ಲರಿಗೂ ದೇವರು. ಕಾಂಗ್ರೆಸಿನಲ್ಲೂ ಬಹಳಷ್ಟು ಮಂದಿ ರಾಮನ ಭಕ್ತರಿದ್ದಾರೆ. ರಾಮನ ವಿಚಾರದಲ್ಲಿ ರಾಜಕೀಯ ಮಾಡಲು ರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಎಂದು ಹೇಳಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಗೈರಾಗುವ ವಿಚಾರದ ಬಗ್ಗೆ ಸುದ್ದಿಗಾರರ ಜೊತೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನಾವೂ ಹಿಂದುಗಳೇ, ನಾನೂ ಕೂಡ ಶ್ರೀರಾಮನ ಭಕ್ತ.
![]()
ನಮಗೂ ಶ್ರೀ ರಾಮಚಂದ್ರ ಆರಾಧ್ಯ ದೇವರೇ. ಶ್ರೀರಾಮ ಹಿಂದೂಗಳ ಆರಾಧ್ಯ ದೈವ. ಕಾಂಗ್ರೆಸ್ನಲ್ಲೂ ಶ್ರೀರಾಮನ ಭಕ್ತರಿದ್ದಾರೆ. ಶ್ರೀರಾಮಚಂದ್ರ ಏನ್ ಬಿಜೆಪಿಯವರ ಅಪ್ಪನ ಮನೆ ಆಸ್ತಿ ಏನೂ ಅಲ್ಲ ಎಂದು ಹೇಳಿದರು.
ನಾವೂ ಶ್ರೀರಾಮನನ್ನು ಆರಾಧಿಸುತ್ತೇವೆ ಎಂದ ಪ್ರದೀಪ್ ಈಶ್ವರ್, ಅಷ್ಟೇ ಅಲ್ಲ ಅಲ್ಲಾಹ್, ಏಸುವನ್ನು ಗೌರವಿಸುತ್ತೇವೆ. ಬಿಜೆಪಿಯವರ ತರಹ ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ ತರುವ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್ ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುತ್ತದೆ ಎಂದು ಹೇಳಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವಿರುದ್ಧವೂ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ಚರ್, ಆತನಷ್ಟು ಅಯೋಗ್ಯ, ಮುಠ್ಠಾಳ ಇನ್ನೊಬ್ಬರಿಲ್ಲ. 45 ವರ್ಷ ರಾಜಕೀಯ ಅನುಭವ ಹೊಂದಿರುವ ಸಿದ್ಧರಾಮಯ್ಯರ ಬಗ್ಗೆ ಮಾತಾಡ್ತಾರೆ. ಪ್ರತಾಪ್ ಸಿಂಹ ಅವರೇ ಬಾಯ್ ಮುಚ್ಚಿಕೊಂಡು ಇರಬೇಕು, ಬಾಯಿ ತೆವಲು ಕಡಿಮೆ ಮಾಡಬೇಕು ಎಂದರು.
ಲೋಕಸಭೆಯ ಪ್ರವೇಶಕ್ಕೆ ಪಾಸ್ ಕೊಟ್ಟ ಪ್ರತಾಪ್ ಸಿಂಹ ದೇಶದ್ರೋಹಿ ಅಲ್ವಾ ಎಂದು ಪ್ರಶ್ನಿಸಿದ ಶಾಸಕ ಪ್ರದೀಪ್ ಈಶ್ವರ್, ಒಂದು ವೇಳೆ ನಾವು ಪಾಸ್ ಕೊಟ್ಟಿದ್ರೆ ಏನ್ ಪಟ್ಟ ಕಟ್ಟುತ್ತಿದ್ರಿ ಎಂದು ಪ್ರಶ್ನಿಸಿದರು. ಇನ್ನು, ಕೇಂದ್ರ ಸರ್ಕಾರ ನಮ್ಮ ಪಾಲಿನ ಅಕ್ಕಿ ಕೊಡ್ತಿದ್ದಾರೆಯೇ ಹೊರತು, ಅವರ ಮನೆಯಿಂದ ತಂದು ಕೊಡ್ತಿಲ್ಲ ಎಂದರು.
MLA Pradeep Eshwar questions asking is Rama BJPs asset.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm