ಬ್ರೇಕಿಂಗ್ ನ್ಯೂಸ್
20-11-20 04:34 pm Headline Karnataka News Network ಕರ್ನಾಟಕ
ದಾವಣಗೆರೆ, ನವೆಂಬರ್ 19 : ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ರಾಷ್ಟ್ರಪಿತನೆಂದು ಸಂವಿಧಾನದಲ್ಲೆಲ್ಲೂ ಉಲ್ಲೇಖಗೊಂಡಿಲ್ಲ. ಗಾಂಧೀಜಿ ರಾಷ್ಟ್ರಪಿತನಾಗಿದ್ದರೆ ಸರಕಾರ ದಾಖಲೆ ನೀಡಲಿ. ಅವರು ಈ ದೇಶದ ರಾಷ್ಟ್ರಪಿತನೇ ಅಲ್ಲ ಎಂದು ಅಖಿಲ ಭಾರತ ಹಿಂದು ಮಹಾಸಭಾದ ಪ್ರಮುಖರಾದ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಧರ್ಮೇಂದ್ರ, ಮಹಾತ್ಮ ಗಾಂಧೀಜಿ ರಾಷ್ಟ್ರಪಿತ ಎನ್ನುವ ಎಂಬ ಬಗ್ಗೆ ನಾವು ಆರ್.ಟಿ.ಐ ಮಾಹಿತಿ ಪಡೆದಿದ್ದೇವೆ. ಆದರೆ, ಅದರಲ್ಲಿ ರಾಷ್ಟ್ರಪಿತನ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಕ್ಕಳಿಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡುತ್ತಿವೆ. ಈ ಬಗ್ಗೆ ಸರ್ಕಾರ, ಪಠ್ಯ ಪುಸ್ತಕ ರಚನಾ ಸಮಿತಿ, ಶಿಕ್ಷಣ ಇಲಾಖೆ ವಿರುದ್ಧ ದೂರು ದಾಖಲಿಸುತ್ತೇವೆ. ಇಲ್ಲದಿದ್ದರೆ ರಾಷ್ಟ್ರಪಿತ ಎನ್ನುವ ಶಬ್ಧವನ್ನು ಪುಸ್ತಕಗಳಿಂದ ತೆಗೆಯಬೇಕು. 1857 ರಲ್ಲಿ ನಡೆದ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಂಗಲ ಪಾಂಡೆ ಮತ್ತು ಝಾನ್ಸಿ ರಾಣಿ ಲಕ್ಷ್ಮೀಬಾಯಿ ಹೋರಾಡಿದ್ದಾರೆ. ಗಾಂಧೀಜಿ ನಂತರ ಬಂದವರು, ಅವರ ಜೊತೆ ಸಾವಿರಾರು ಮಂದಿ ಹೋರಾಡಿದ್ದಾರೆ ಎಂದು ಹೇಳಿದರು.
ಮಹಾತ್ಮ ಗಾಂಧೀಜಿಯಿಂದಲೇ ಸ್ವಾತಂತ್ರ್ಯ ಸಿಕ್ಕಿದ್ದಲ್ಲ. ಗಾಂಧಿಜೀಯನ್ನು ಯಾಕೆ ಅಷ್ಟೊಂದು ವೈಭವೀಕರಣ ಮಾಡುತ್ತೀರಿ ಎಂದು ಪ್ರಶ್ನಿಸಿದ ಧರ್ಮೇಂದ್ರ, ದೇಶದ ಇತರ ಸ್ವಾತಂತ್ರ್ಯ ಹೋರಾಟಗಾರರಿಗೂ ಗಾಂಧಿಜೀಯಷ್ಟೇ ಗೌರವ ನೀಡಬೇಕು. ಗಾಂಧಿಜೀಯಿಂದಲೇ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವುದು ಮೂರ್ಖತನ. ಬಿಜೆಪಿ ಅಧಿಕಾರಕ್ಕೆ ಬಂದ ನಂತರವೂ ಸತ್ಯ ಹೇಳಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ.
President of all India Hindu Maha Sabha Dharmendra has alleged that Gandhi is not the father of the Nation by speaking to the media persons in Davanagere.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm