ಬ್ರೇಕಿಂಗ್ ನ್ಯೂಸ್
20-11-20 04:34 pm Headline Karnataka News Network ಕರ್ನಾಟಕ
ದಾವಣಗೆರೆ, ನವೆಂಬರ್ 19 : ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ರಾಷ್ಟ್ರಪಿತನೆಂದು ಸಂವಿಧಾನದಲ್ಲೆಲ್ಲೂ ಉಲ್ಲೇಖಗೊಂಡಿಲ್ಲ. ಗಾಂಧೀಜಿ ರಾಷ್ಟ್ರಪಿತನಾಗಿದ್ದರೆ ಸರಕಾರ ದಾಖಲೆ ನೀಡಲಿ. ಅವರು ಈ ದೇಶದ ರಾಷ್ಟ್ರಪಿತನೇ ಅಲ್ಲ ಎಂದು ಅಖಿಲ ಭಾರತ ಹಿಂದು ಮಹಾಸಭಾದ ಪ್ರಮುಖರಾದ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಧರ್ಮೇಂದ್ರ, ಮಹಾತ್ಮ ಗಾಂಧೀಜಿ ರಾಷ್ಟ್ರಪಿತ ಎನ್ನುವ ಎಂಬ ಬಗ್ಗೆ ನಾವು ಆರ್.ಟಿ.ಐ ಮಾಹಿತಿ ಪಡೆದಿದ್ದೇವೆ. ಆದರೆ, ಅದರಲ್ಲಿ ರಾಷ್ಟ್ರಪಿತನ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಕ್ಕಳಿಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡುತ್ತಿವೆ. ಈ ಬಗ್ಗೆ ಸರ್ಕಾರ, ಪಠ್ಯ ಪುಸ್ತಕ ರಚನಾ ಸಮಿತಿ, ಶಿಕ್ಷಣ ಇಲಾಖೆ ವಿರುದ್ಧ ದೂರು ದಾಖಲಿಸುತ್ತೇವೆ. ಇಲ್ಲದಿದ್ದರೆ ರಾಷ್ಟ್ರಪಿತ ಎನ್ನುವ ಶಬ್ಧವನ್ನು ಪುಸ್ತಕಗಳಿಂದ ತೆಗೆಯಬೇಕು. 1857 ರಲ್ಲಿ ನಡೆದ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಂಗಲ ಪಾಂಡೆ ಮತ್ತು ಝಾನ್ಸಿ ರಾಣಿ ಲಕ್ಷ್ಮೀಬಾಯಿ ಹೋರಾಡಿದ್ದಾರೆ. ಗಾಂಧೀಜಿ ನಂತರ ಬಂದವರು, ಅವರ ಜೊತೆ ಸಾವಿರಾರು ಮಂದಿ ಹೋರಾಡಿದ್ದಾರೆ ಎಂದು ಹೇಳಿದರು.
ಮಹಾತ್ಮ ಗಾಂಧೀಜಿಯಿಂದಲೇ ಸ್ವಾತಂತ್ರ್ಯ ಸಿಕ್ಕಿದ್ದಲ್ಲ. ಗಾಂಧಿಜೀಯನ್ನು ಯಾಕೆ ಅಷ್ಟೊಂದು ವೈಭವೀಕರಣ ಮಾಡುತ್ತೀರಿ ಎಂದು ಪ್ರಶ್ನಿಸಿದ ಧರ್ಮೇಂದ್ರ, ದೇಶದ ಇತರ ಸ್ವಾತಂತ್ರ್ಯ ಹೋರಾಟಗಾರರಿಗೂ ಗಾಂಧಿಜೀಯಷ್ಟೇ ಗೌರವ ನೀಡಬೇಕು. ಗಾಂಧಿಜೀಯಿಂದಲೇ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವುದು ಮೂರ್ಖತನ. ಬಿಜೆಪಿ ಅಧಿಕಾರಕ್ಕೆ ಬಂದ ನಂತರವೂ ಸತ್ಯ ಹೇಳಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ.
President of all India Hindu Maha Sabha Dharmendra has alleged that Gandhi is not the father of the Nation by speaking to the media persons in Davanagere.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm