ಬ್ರೇಕಿಂಗ್ ನ್ಯೂಸ್
14-01-24 01:47 pm HK News Desk ಕರ್ನಾಟಕ
ಕಾರವಾರ, ಜ 13: ಪ್ರಚೋದನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣ ಆರೋಪಗಳಡಿ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153ಎ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕುಮುಟಾದಲ್ಲಿ ಶನಿವಾರ ನಡೆದಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಹೆಗಡೆ, "ಅಂದು ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಗೋ ಹತ್ಯೆ ನಿಷೇಧದ ಬಗ್ಗೆ ದೊಡ್ಡ ಆಂದೋಲನ ನಡೆದಿತ್ತು. ಈ ಆಂದೋಲನದಲ್ಲಿ ಗೋಲಿಬಾರ್ ನಡೆದು ಹತ್ತಾರು ಸಂತರು ಸತ್ತರು. ಇಂದಿರಾ ಗಾಂಧಿ ಸಮ್ಮುಖದಲ್ಲಿ ಈ ಹತ್ಯೆ ನಡೆಯಿತು" ಎಂದು ಆರೋಪಿಸಿದ್ದರು.
ಕೆಲವರು ಜಾತಿ, ಭಾಷೆ, ಪ್ರಾದೇಶಿಕತೆ ಹಾಗು ಇತರ ಹೆಸರಿನಲ್ಲಿ ಸಮಾಜ ಒಡೆಯುತ್ತಿದ್ದಾರೆ. ಈಗಲೂ ಅದೇ ಕೆಲಸ ನಡೆಯುತ್ತಿದೆ. ಆದರೂ ಕೂಡ ಸಮಾಜ ಒಟ್ಟಿಗೆ ನಿಂತಿದೆ. ಹೀಗಾಗಿ ಈಗಿನ ಗೆಲುವನ್ನು ಮುಂದಿನ ಶತಮಾನದಲ್ಲೂ ನೆನೆಯುವಂತಿರಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿರುವಂತೆ ಈ ಬಾರಿಯ ಗೆಲುವು ಮುಂದಿನ ದಿನಗಳಲ್ಲಿ ಅಳಿಸಲು ನಮ್ಮಿಂದಲೂ ಆಗಬಾರದು. ಗೆಲುವಿನ ಹೊಡೆತ ನಮ್ಮ ವಿರೋಧಿಗಳಿಗೆ ಆಗಬೇಕು. ನಮ್ಮ ವಿರೋಧ ಕಾಂಗ್ರೆಸ್ ಅಲ್ಲ. ಆದರೆ, ನಮ್ಮ ವಿರೋಧಿ ಸಿದ್ದರಾಮಯ್ಯ" ಎಂದು ವಾಗ್ದಾಳಿ ನಡೆಸಿದ್ದರು.
ಸಿಎಂ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ನಲ್ಲಿ ಅನಂತ ಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ, "ರಾಜಕೀಯ ಉದ್ದೇಶದಿಂದ ಉತ್ತರ ಕನ್ನಡ ಸಂಸದರಾದ ಅನಂತ ಕುಮಾರ್ ಹೆಗಡೆಯವರು ಬಳಸಿದ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಕೇಂದ್ರದ ಮಂತ್ರಿಯಾಗಿದ್ದಾಗ, ಸಂವಿಧಾನವನ್ನೇ ಬದಲಾಯಿಸುತ್ತೇನೆ ಎಂದು ಹೇಳಿದ್ದರು. ಹೀಗಾಗಿ ಅವರಿಂದ ಉತ್ತಮ ಸಂಸ್ಕೃತಿಯನ್ನು ಅಪೇಕ್ಷಿಸಲು ಸಾಧ್ಯವೇ'' ಎಂದು ಬರೆದಿದ್ದಾರೆ
A suo motu case has been registered against BJP MP Anant Kumar Hegde at Kumta police station on charges of making inflammatory remarks and making hate speeches. An FIR has been registered under IPC sections 505 and 153A.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am