ಬ್ರೇಕಿಂಗ್ ನ್ಯೂಸ್
15-01-24 09:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.15: ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿದ ಬಾಲರಾಮನ ಮೂರ್ತಿಯೇ ಅಯೋಧ್ಯೆ ರಾಮ ಜನ್ಮಭೂಮಿಯ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠೆಗೊಳ್ಳಲು ಫೈನಲ್ ಆಗಿದೆ.
ಅಯೋಧ್ಯೆಯ ಶ್ರೀರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠೆ ಮಾಡುವುದಕ್ಕಾಗಿ ಮೂರು ಅಪೂರ್ವ ಮೂರ್ತಿಗಳನ್ನು ಕೆತ್ತಲಾಗಿತ್ತು. ಅದರಲ್ಲಿ ಯಾವ ಮೂರ್ತಿ ಗರ್ಭಗುಡಿ ಸೇರಲಿದೆ ಎಂಬ ಕುತೂಹಲ ಇತ್ತು. ಈಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಮೂರು ಮೂರ್ತಿಗಳಲ್ಲಿ ಯಾವುದು ಬೆಟರ್ ಅನ್ನುವ ಬಗ್ಗೆ ಡಿ.29 ರಂದು ಮತದಾನ ಪ್ರಕ್ರಿಯೆ ನಡೆದಿತ್ತು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿನ 11 ಸದಸ್ಯರು ಮೂರ್ತಿ ಆಯ್ಕೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಒಂದು ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಿದರೆ ಇನ್ನುಳಿದ ಎರಡು ಮೂರ್ತಿಯನ್ನು ರಾಮ ದೇಗುಲದ ಒಳಗಡೆಯಲ್ಲೇ ಇಡುವುದಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.
ಶಿಲ್ಪಿಗಳಾದ ಕರ್ನಾಟಕದ ಮೈಸೂರು ಮೂಲದ ಅರುಣ್ ಯೋಗಿರಾಜ್, ಗಣೇಶ್ ಭಟ್ ಮತ್ತು ಜೈಪುರದ ಸತ್ಯನಾರಾಯಣ ಪಾಂಡೆ ಪ್ರತ್ಯೇಕ ಮೂರು ಮೂರ್ತಿಗಳನ್ನು ಕೆತ್ತನೆ ಮಾಡಿದ್ದಾರೆ. ಕನ್ನಡಿಗರಾದ ಅರುಣ್ ಯೋಗಿರಾಜ್ ಮತ್ತು ಗಣೇಶ ಭಟ್ ಮೈಸೂರಿನ ಕೃಷ್ಣಶಿಲೆಯನ್ನು ಬಳಕೆ ಮಾಡಿ ಮೂರ್ತಿ ಕೆತ್ತನೆ ಮಾಡಿದ್ದರು. ಸತ್ಯನಾರಾಯಣ ಪಾಂಡೆ ಅವರು ರಾಜಸ್ಥಾನದಿಂದ ತರಿಸಿದ್ದ ಕಲ್ಲನ್ನು ಬಳಕೆ ಮಾಡಿದ್ದರು. ರಾಮಲಲ್ಲಾ ಮೂರ್ತಿಯ ದೀರ್ಘಾವಧಿ ಬಾಳಿಕೆ ಕುರಿತು ತಾಂತ್ರಿಕ ವರದಿಯನ್ನೂ ಪಡೆಯಲಾಗಿದೆ. ಅಂತಿಮವಾಗಿ ಅರುಣ್ ಯೋಗಿರಾಜ್ ತಯಾರಿಸಿದ ಮೂರ್ತಿಯನ್ನೇ ಆಯ್ಕೆ ಮಾಡಲಾಗಿದೆ.
the shyam rang (dark coloured) Ram Lalla idol sculpted on ‘Krishna Shila’ (black stone) by Mysuru-based sculptor Arun Yogiraj has been selected for installation in the garbha griha (sanctum sanctorum) of the new Ram Temple in Ayodhya.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm