ಬ್ರೇಕಿಂಗ್ ನ್ಯೂಸ್
16-01-24 03:28 pm HK News Desk ಕರ್ನಾಟಕ
ಕಾರವಾರ, ಜ.16: ಪ್ರಧಾನಿ ಮೋದಿ ಅವರನ್ನು ಏಕವಚನದಲ್ಲಿ ಸಿದ್ದರಾಮಯ್ಯ ಮಾತನಾಡಿದ್ದು ಸರಿಯಾಗಿದ್ರೆ, ನಾನು ಮಾತನಾಡಿದ್ದೂ ಸರಿ. ಯಾರು ನನ್ನನ್ನು ಒಪ್ಕೊತಾರೋ ಬಿಡ್ತಾರೊ ಗೊತ್ತಿಲ್ಲ, ಆ ದೇವರು ಒಪ್ಕೊಳ್ತಾನೆ. ಹಿಂದೂ ಸಮಾಜದ ಜನರು ಒಪ್ಕೊಳ್ಳತ್ತೆ ಎಂದು ಸಂಸದ ಅನಂತ ಕುಮಾರ ಹೆಗಡೆ ಹೇಳಿದ್ದಾರೆ.
ವಿವಾದಾತ್ಮಕ ಹೇಳಿಕೆ ಬಿಜೆಪಿ ನಾಯಕರಿಂದಲೇ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅನಂತ ಹೆಗಡೆ ಸಮರ್ಥನೆ ನೀಡಿದ್ದಾರೆ. ನಾನು ಹೇಳಿದಷ್ಟನ್ನು ರೆಕಾರ್ಡ್ ಮಾಡಿಕೊಳ್ಳಿ ಹಂಗೆ ಹಾಕಿಕೊಳ್ಳಿ. ನೀವು ನನ್ನ ಹೇಳಿಕೆಯನ್ನು ಕಟ್ ಮಾಡಿದ್ರೆ ನಾನು ನನ್ನ ಸೋಶಿಯಲ್ ಮಿಡಿಯಾದಲ್ಲಿ ಬಿಡ್ತೇನೆ ಎಂದು ಆರಂಭದಲ್ಲೇ ಮಾಧ್ಯಮಗಳಿಗೆ ಸೂಚನೆ ನೀಡಿದ ಹೆಗಡೆ, ಆನಂತರ ತನ್ನ ಹೇಳಿಕೆಯನ್ನು ಸಮರ್ಥಿಸಿದ್ದಾರೆ. ನನ್ನ ಹೇಳಿಕೆಯನ್ನು ಖಂಡಿಸುವುದು ಸಹಜ. ಇದು ನನ್ನ ವೈಯಕ್ತಿಕ ಹೇಳಿಕೆ, ಇದು ಪಕ್ಷದ ಹೇಳಿಕೆ ಅಲ್ಲ, ಇದು ನನ್ನ ವೈಯಕ್ತಿಕ ಹೇಳಿಕೆ. ವಿಜಯೇಂದ್ರ ಹೇಳಿರುವ ಮಾತು ಸರಿ ಇದೆ. ಸಂಸ್ಕೃತಿ ಬಗ್ಗೆ ಸಿದ್ಧರಾಮಯ್ಯ ಅವರೇ ನನ್ನ ಎದುರು ಬಂದು ಮಾತನಾಡಲಿ. ಇದರ ಎಲ್ಲದರ ಬಗ್ಗೆ ನಾವಿಬ್ರೂ ಕುತ್ಕೊಂಡು ಜನರ ಮುಂದೆ ಚರ್ಚೆ ಮಾಡೋಣ. ಎಲ್ಲೋ ಕುತ್ಕೊಂಡು ಸಭೆಯಲ್ಲಿ ಮಾತನಾಡುವುದು ಸರಿ ಅಲ್ಲ ಎಂದು ಹೇಳಿದರು.
ನಮ್ಮ ಪ್ರಧಾನಿ ಮೋದಿ, ಅಮಿತ್ ಶಾ ಬಗ್ಗೆ ಯಾರೆಲ್ಲಾ ಏನೇನ್ ಮಾತಾಡಿದಾರೆ ಹೇಳಬೇಕಾ.?ಶರದ್ ಪವಾರ್ ಮೋದಿಯರನ್ನು ಹಿಟ್ಲರ್ ಅಂತಾ ಕರೆದ್ರು. ಕಾಂಗ್ರೆಸಿನ ಬಹುತೇಕ ನಾಯಕರು ಇವರನ್ನು ಹಿಟ್ಲರ್ ಎಂದು ಕರೆದರು. ಇದಕ್ಕೆಲ್ಲಾ ಮಿಡಿಯಾದಲ್ಲೇ ದಾಖಲೆಗಳು ಇವೆ. ಸಿಎಂ ಸಿದ್ಧರಾಮಯ್ಯ ಮೋದಿಯವರನ್ನು ಏಕವಚನದಲ್ಲಿ ಮಾಸ್ ಮರ್ಡರರ್ ಎಂದು ಕರೆದರು. ಇದು ನನ್ನ ಪ್ರಧಾನಿ, ನನ್ನ ದೇಶ ನನ್ನ ಧರ್ಮದ ಬಗ್ಗೆ ಹೇಳಿರುವ ಹೇಳಿಕೆಯಲ್ಲಿ ಯಾವುದೇ ಹಿಂಜರಿಕೆ ಇಲ್ಲ.
ದಿಗ್ವಿಜಯ ಸಿಂಗ್ ಮೋದಿಯವರನ್ನ ರಾವಣ ಅಂತಾ ಕರೆದ್ರು. ಜಯರಾಂ ರಮೇಶ್ ಭಸ್ಮಾಸುರ ಅಂತಾ ಕರೆದ್ರು. ಮನೀಶ್ ಅಯ್ಯರ್ ವಿಷ ಸರ್ಪ ಅಂತಾ ಕರೆದ್ರು. ಇನ್ನೂ ಏನ್ರಿ ಹೇಳಿಸಿಕೊಳ್ಳಬೇಕು ನಾವು..?ಕಾಂಗ್ರೆಸ್ ನಾಯಕರು ಎಲ್ರೂ ನನ್ನ ಮುಂದೆ ಬಂದು ಸಂಸ್ಕೃತಿ ಬಗ್ಗೆ ಚರ್ಚೆ ಮಾಡಲಿ. ಸಭ್ಯತೆ ಅಂದ್ರೆ ಏನು ಅಂತಾ ನಾನು ಪಾಠ ಮಾಡ್ತೀನಿ. ಏನೂ ಮಾತನಾಡಬೇಕು ಅಂತಾ ನಾನು ಹೇಳ್ತಿನಿ. ಯಾರಿಗೆ ಯಾವ ಭಾಷೆಯಲ್ಲಿ ಹೇಗೆ ಮಾತಾಡಬೇಕು ಹಾಗೆ ಮಾತಾಡಬೇಕು
ಅವರಿಗೊಂದು ನ್ಯಾಯ ನಮಗೊಂದು ನ್ಯಾಯನಾ..? ಅದೆಲ್ಲಾ ನಮಗೆ ಗೊತ್ತಿಲ್ಲ, ಯಾರಿಗೆ ಹೇಗೆ ಮಾತಾಡಬೇಕು ನಮಗೆ ಗೊತ್ತು. ರಾಮ ಮಂದಿರ ಬಗ್ಗೆ ಬಗ್ಗೆ ಎಷ್ಟು ಅವಹೇಳನಕಾರಿಯಾಗಿ ಮಾತಾಡಿದ್ರು. ಎಷ್ಟು ಕೀಳಾಗಿ ಹಿಂದೂ ಸಮಾಜದ ಬಗ್ಗೆ ಮಾತಾಡಿದ್ರು. ಹಿಂದೂ ಸಮಾಜ ಅಂದ್ರೆ ಬೇವರ್ಸಿ ಸಮಾಜಾನಾ..? 20 % ಮತಕ್ಕಾಗಿ ಎಷ್ಟೊಂದು ಜೊಲ್ಲೂ ಸುರಿಸುತ್ತಾ ಮಾತನಾಡುತ್ತಾರೆ. 80 ರಿಂದ 85% ಇರುವ ಹಿಂದೂ ಸಮಾಜದ ಬಗ್ಗೆ ನಿಮಗೆ ಗೌರವ ಯಾಕಿಲ್ಲ. ನನ್ನ ಧ್ವನಿ ಇದೇ ರೀತಿ. ಏಕವಚನದಲ್ಲಿ ನೀವೂ ಮಾತನಾಡಿದ್ದೂ ಸರಿ ಆಗಿದ್ರೆ, ನಾನು ಮಾತನಾಡಿದ್ದೂ ಕೂಡಾ ಸರಿ. ಯಾರೂ ನನ್ನ ಒಪ್ಕೊತಾರೆ ಬಿಡ್ತಾರೋ ಗೊತ್ತಿಲ್ಲ, ಆ ದೇವರು ಒಪ್ಕೊಳ್ತಾನೆ. ಹಿಂದೂ ಸಮಾಜದ ಜನರು ಒಪ್ಕೊಳ್ತಾರೆ.
ನಾಲ್ಕೂವರೆ ವರ್ಷ ಎಲ್ಲಿದ್ರೂ , ಕುಂಭಕರ್ಣ ಎಂಬ ಕಾಂಗ್ರೆಸ್ ಟೀಕೆ ಮಾಡಿರುವ ವಿಚಾರದಲ್ಲಿ, ಅದಕ್ಕೆಲ್ಲಾ ನಾನು ಮುಂದಿನ ದಿನಗಳಲ್ಲಿ ಉತ್ತರ ಕೊಡ್ತೇನೆ. ಎಲ್ಲದಕ್ಕೂ ಉತ್ತರ ಕೊಡ್ತೇನೆ, ಯಾವುದಕ್ಕೂ ಬಡ್ಡಿ ಗಿಡ್ಡಿ ಇಟ್ಟುಕೊಳ್ಳುವ ಪ್ರಶ್ನೆ ಇಲ್ಲ ಎಂದು ಹೇಳಿದರು.
Ananth kumar hegde says i am not guilt of calling CM Siddaramaiah in singular words.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm