ಬ್ರೇಕಿಂಗ್ ನ್ಯೂಸ್
16-01-24 10:07 pm Bangalore Correspondent ಕರ್ನಾಟಕ
ಬೆಂಗಳೂರು, ಜ 16: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಧಾರ್ಮಿಕ ವಿಧಿ ವಿಧಾನಗಳು ಪ್ರಾರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಶ್ರೀರಾಮನ ಕುರಿತ ಕನ್ನಡದ ಹಾಡೊಂದಕ್ಕೆ ತಲೆದೂಗಿದ್ದಾರೆ. ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರು ಹಾಡಿರುವ 'ಪೂಜಿಸಲೆಂದೇ ಹೂಗಳ ತಂದೆ..' ಕನ್ನಡ ಹಾಡಿನ ಲಿಂಕ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೆಚ್ಚಿಕೊಂಡಿದ್ದಾರೆ.
ಯೂಟ್ಯೂಬ್ ಲಿಂಕ್ ಶೇರ್ ಮಾಡಿರುವ ಮೋದಿ, "ಶಿವಶ್ರೀ ಸ್ಕಂದ ಪ್ರಸಾದ್ ಅವರು ಹಾಡಿದ ಹಾಡು ಪ್ರಭು ಶ್ರೀರಾಮನ ಮೇಲಿನ ಭಕ್ತಿ ಭಾವವನ್ನು ಸುಂದರವಾಗಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹುದೊಡ್ಡ ಪಾತ್ರ ನಿರ್ವಹಿಸುತ್ತವೆ" ಎಂದಿದ್ದಾರೆ. ಇದರ ಜೊತೆಗೆ, #ShriRamBhajan ಎಂಬ ಹ್ಯಾಶ್ಟ್ಯಾಗ್ ಬಳಸಿದ್ದಾರೆ.
ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಸಂತಸ ವ್ಯಕ್ತಪಡಿಸಿದ್ದು, "ತುಂಬಾ ಧನ್ಯವಾದಗಳು ಸರ್. ಇದು ಕಲ್ಪನೆಗೂ ಮೀರಿದ ಗೌರವ. ನಿಮಗೆ ನನ್ನ ಪ್ರಣಾಮಗಳು" ಎಂದು ಎಕ್ಸ್ನಲ್ಲಿ ತಿಳಿಸಿದ್ದಾರೆ. "ನನಗಿದು ತುಂಬಾ ಸಂತೋಷದ ಕ್ಷಣ. ನಾನೀಗ ಅನುಭವಿಸುತ್ತಿರುವ ಭಾವನೆಯನ್ನು ವರ್ಣಿಸಲು ಪದಗಳೇ ಇಲ್ಲ. ಮೈ ರೋಮಾಂಚನಗೊಳ್ಳುವ ಕ್ಷಣ. ಇದು ಭಗವಾನ್ ರಾಮನ ಆಶೀರ್ವಾದ. ನನ್ನ ಹಾಡಿಗೆ ಇಷ್ಟೊಂದು ಮನ್ನಣೆ ಸಿಗುತ್ತದೆ ಎಂದು ಕನಸಲ್ಲೂ ಅಂದುಕೊಂಡಿರಲಿಲ್ಲ" ಎಂದು ಪ್ರಧಾನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಪೂಜಿಸಲೆಂದೇ ಹೂಗಳ ತಂದೆ, ದರುಶನ ಕೋರಿ ನಾ ನಿಂದೆ.. ತೆರೆಯೋ ಬಾಗಿಲನು ರಾಮ.." ಇದು ಮೂಲತಃ ಡಾ.ರಾಜ್ಕುಮಾರ್ ಹಾಗೂ ಮಿನುಗುತಾರೆ ಕಲ್ಪನಾ ಅಭಿನಯದ 'ಎರಡು ಕನಸು' ಸಿನಿಮಾದ ಹಾಡು. ದೊರೈ-ಭಗವಾನ್ ಜೋಡಿ ನಿರ್ದೇಶನದ ಈ ಸಿನಿಮಾ 1974ರಲ್ಲಿ ತೆರೆಕಂಡು, ಸಿನಿಪ್ರಿಯರ ಮನಸ್ಸುಗೆದ್ದಿತ್ತು. ಇಂದಿಗೂ ಈ ಹಾಡು ಮಾತ್ರವಲ್ಲ, ಸಿನಿಮಾ ಕೂಡ ಕನ್ನಡಿಗರ ಮನಸಲ್ಲಿ ಅಜರಾಮರವಾಗಿದೆ. ಚಿ.ಉದಯಶಂಕರ್ ಬರೆದಿದ್ದ ಸಾಹಿತ್ಯಕ್ಕೆ ರಾಜನ್ ನಾಗೇಂದ್ರ ಸಂಗೀತ ಸಂಯೋಜನೆ ಮಾಡಿದ್ದರು. ಗಾನ ಸರಸ್ವತಿ ಎಸ್. ಜಾನಕಿ ಅದ್ಭುತವಾಗಿ ಹಾಡಿದ್ದರು. ಸಿನಿಮಾದಲ್ಲಿ ನಾಯಕಿ ಕಲ್ಪನಾ ಶ್ರೀರಾಮನ ಪೂಜೆಗೆಂದು ಹಾಡುವ ಈ ಹಾಡು ಇದೀಗ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ತಮ್ಮದೇ ಶೈಲಿಯಲ್ಲಿ ಹಾಡಿ, ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾರೆ.
This rendition by Sivasri Skandaprasad in Kannada beautifully highlights the spirit of devotion to Prabhu Shri Ram. Such efforts go a long way in preserving our rich cultural heritage. #ShriRamBhajanhttps://t.co/9wYmjhC4p5
— Narendra Modi (@narendramodi) January 16, 2024
A Kannada song from the 1974 Rajkumar starrer Eradu Kanasu was trending on social media platforms on Tuesday after Prime Minister Narendra Modi posted a video of Chennai-based vocalist Sivasri Skandaprasad singing it.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm